ಭಗತ್ ಸಿಂಗ್, ಸುಖ್ದೇವ್, ರಾಜ್ಗುರು ಹುತಾತ್ಮ ದಿನ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಬೆಂಗಳೂರು, ಮಾ.23 ,ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖ್ದೇವ್ ಹಾಗೂ ರಾಜ್ಗುರು ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಭಗತ್ ಸಿಂಗ್ ಅವರು, ಸುಖ್ ದೇವ್, ರಾಜ್ ಗುರು ಅವರೊಟ್ಟಿಗೆ ದೇಶದ ದಾಸ್ಯ ಮುಕ್ತಿಗಾಗಿ ನೇಣಿಗೆ ಕೊರಳೊಡ್ಡಿ ಹುತಾತ್ಮರಾದ ದಿನವಿದು. ಸ್ವಾತಂತ್ರ್ಯದೆಡೆಗಿನ ಅವರ ತುಡಿತ, ದೇಶಪ್ರೇಮ, ತ್ಯಾಗಗಳಿಗೆ ಕೋಟಿ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.ಉಪ ಮುಖ್ಯಮಂತ್ರಿ ಗೋವಿಂದ ಕಾರಜೊಳ ಟ್ವೀಟ್ ಮಾಡಿ, ಬ್ರಿಟಿಷರಿಂದ ಭಾರತವನ್ನು ಸ್ವತಂತ್ರಗೊಳಿಸಲು ಕಿರಿಯ ವಯಸ್ಸಿನಲ್ಲೇ ಪ್ರಾಣಾರ್ಪಣೆ ಮಾಡಿದ ಈ ಮಹಾನ್ ದೇಶಭಕ್ತರನ್ನು ನಾವೆಲ್ಲರೂ ಸ್ಮರಿಸೋಣ ಎಂದು ತಿಳಿಸಿದ್ದಾರೆ.ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಸ್ವಾತಂತ್ರ್ಯ ಹೋರಾಟಗಾರರು, ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಈ ದಿನ ಹುತಾತ್ಮರ ದಿನವಾಗಿ ಆಚರಣೆ ಮಾಡಲಾಗುತ್ತದೆ. ಅವರ ತ್ಯಾಗ ಬಲಿದಾನವನ್ನು ಗೌರವಪೂರ್ವಕವಾಗಿ ನೆನೆಯುತ್ತೇವೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 