ಭಗೀರಥರ ಆದರ್ಶಗಳು ಯುವಕರಿಗೆ ಪ್ರೇರಣೆ : ಶಿವರಾಜ ಶಿವಪುರ
Bhagirath's ideals inspire youth: Shivaraj Shivapura
ಲೋಕದರ್ಶನ ವರದಿ
ಭಗೀರಥರ ಆದರ್ಶಗಳು ಯುವಕರಿಗೆ ಪ್ರೇರಣೆ : ಶಿವರಾಜ ಶಿವಪುರ
ಕಂಪ್ಲಿ 05; ಸ್ಥಳೀಯ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಭಗೀರಥ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರಕ್ಕೆ ವಿಶೇಷ ಪೂಜೆ, ಪುಷ್ಪ ನಮನದೊಂದಿಗೆ ಭಾನುವಾರ ಜಯಂತಿ ಆಚರಿಸಲಾಯಿತು. ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಭಗೀರಥ ಇವರು ನಾಡಿಗೆ ಕೊಡುಗೆ ನೀಡಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಆಲಿಸಬೇಕು ಎಂದರು. ಭಗೀರಥ ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ಯು.ರುದ್ರ್ಪ ಮಾತನಾಡಿ, ರಾಜ್ಯದಲ್ಲಿ ಸುಮಾರು 30-40 ಲಕ್ಷ ಜನಸಂಖ್ಯೆ ಇದ್ದು, ಆದರೆ, ಸರ್ಕಾರ ಉಪ್ಪಾರ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿವಹಿಸುತ್ತಿಲ್ಲ. ಕೂಡಲೇ ಹಿಂದಿನ ಜಾತಿಗಣತಿ ಪರೀಶೀಲಿಸಬೇಕು. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದರು. ತಾಲೂಕು ಪ್ರಧಾನ ಕಾರ್ಯದರ್ಶಿ ಯು.ಬಸವರಾಜ ಮಾತನಾಡಿ, ಸಮುದಾಯವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದ್ದು, ಸರ್ಕಾರದ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಬೇಕು. ತಾಲೂಕು ಮಟ್ಟದಲ್ಲಿ ಸಮುದಾಯ ಭವನ ನಿರ್ಮಿಸಬೇಕು ಎಂದರು. ಈ ಸಂದರ್ಭದಲ್ಲಿ ಯು.ನಾಗರಾಜ, ದೊಡ್ಡಬಸಪ್ಪ, ವೆಂಕಟೇಶ, ಮುನಿಯಪ್ಪ, ಪೂಜಾರಿ ಈರಣ್ಣ, ನಾಗಾರ್ಜುನ, ಮಂಜುನಾಥ, ಕುಬೇರ, ಗೋವಿಂದಪ್ಪ, ವೆಂಕಟೇಶ, ಗುರುಮೂರ್ತಿ, ಜ್ಞಾನಪ್ಪ, ಮಂಜುನಾಥ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 