ಬುಡಾ ಕಚೇರಿಯ ಮಹಾದ್ವಾರಕ್ಕೆ ಶಂಕುಸ್ಥಾಪನೆ ಮಾಡಿದ ಸಚಿವ ಭೈರತಿ ಬಸವರಾಜ್
ಬಳ್ಳಾರಿ,ಜೂ 29: ನಗರದ ಹೆಚ್.ಆರ್.ಜಿ ಗವಿಯಪ್ಪ ವೃತ್ತದಲ್ಲಿರುವ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮಹಾದ್ವಾರದ ಶಂಕುಸ್ಥಾಪನೆಯನ್ನು ಸೋಮವಾರ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ಅವರು ನೆರವೇರಿಸಿದರು.
ಒಟ್ಟಾರೆ 59.15 ಲಕ್ಷ ರೂ.ಗಳ ಈ ಯೋಜನೆಯಡಿ ಪ್ರಾಧಿಕಾರದ ಆವರಣದ ಸುತ್ತ ಚೈನ್ ಲಿಂಕ್ ಮೆಶ್ ಗೇಟ್ ಅಳವಡಿಸಿಕೆ, ಸಸಿ ನೆಡುವುದು, ಠೇಕೂರ್ ಸುಬ್ರಮಣ್ಯಂ ಉದ್ಯಾನವನ ಅಭಿವೃದ್ಧಿ, ಸ್ವಾಗತ ಕಮಾನು, ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಒಳಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೋ ಹಾಲು ಒಕ್ಕೂಟದ ನಿದರ್ೆಶಕ ವೀರಶೇಖರ ರೆಡ್ಡಿ, ಬುಡಾ ಆಯುಕ್ತ ಈರಪ್ಪ ಬಿರಾದಾರ್, ಅಭಿಯಂತರರಾದ ರವಿಶಂಕರ, ಪಾಲಿಕೆ ಸದಸ್ಯರು, ಮುಖಂಡರು ಸೇರಿದಂತೆ ಇತರರು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 