ಸಾರಿಗೆ ಬಸ್ ನಿಲುಗಡೆಗೆ ಭೀಮ್ ಆರ್ಮಿ ಒತ್ತಾಯ
Bhim Army demands halt to transport buses
ಸಾರಿಗೆ ಬಸ್ ನಿಲುಗಡೆಗೆ ಭೀಮ್ ಆರ್ಮಿ ಒತ್ತಾಯ
ಕಂಪ್ಲಿ 04: ನಂ.10 ಮುದ್ದಾಪುರ ಗ್ರಾಪಂಯ ಯಲ್ಲಮ್ಮಕ್ಯಾಂಪ್ ಬಳಿಯಲ್ಲಿರುವ ಮುಖ್ಯ ರಸ್ತೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗಾಗಿ ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ, ಭೀಮ್ ಆರ್ಮಿ ತಾಲೂಕು ಘಟಕದಿಂದ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ನಿಯಂತ್ರಣಾಧಿಕಾರಿ ಆಧಿಶೇಷಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.
ನಂತರ ತಾಲೂಕು ಅಧ್ಯಕ್ಷ ಎ.ಎಸ್.ಯಲ್ಲಪ್ಪ ಮಾತನಾಡಿ, ಕಂಪ್ಲಿಯಿಂದ ಸುಮಾರು 3-4 ಕಿ.ಮೀಟರ್ ದೂರದಲ್ಲಿ ಡಿಪ್ಲೋಮಾ, ಹಾಸ್ಟೇಲ್ ಇದ್ದು, ಇಲ್ಲಿಗೆ ಬರಲು ದೂರವಾಗುವುದರಿಂದ ಸಾರಿಗೆ ಬಸ್ ನಿಲ್ಲಿಸುವುದಿಲ್ಲ. ದಿನನಿತ್ಯದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಮುದ್ದಪುರ ಗ್ರಾಪಂಯ ಯಲ್ಲಮ್ಮ ಕ್ಯಾಂಪ್ನಿಂದ ಕಂಪ್ಲಿಗೆ ಬರಲು ಸರಿಯಾಗಿ ಕೆಎಸ್ಆರ್ಟಿಸಿ ಬಸ್ಗಳು ನಿಲುಗಡೆ ಮಾಡದೇ ಇರುವುದರಿಂದ ತುಂಬ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೂಲಕ ಸಂಚರಿಸಬೇಕಾಗಿದೆ. ಇಲ್ಲಿನ ಮುಖ್ಯರಸ್ತೆಯಲ್ಲಿ ಸಾಕಷ್ಟು ಸಾರಿಗೆ ಬಸ್ಗಳ ಓಡಾಟ ಇದ್ದರೂ, ನಿಲ್ಲಿಸುತ್ತಿಲ್ಲ. ಆದ್ದರಿಂದ ಕೂಡಲೇ ಅಧಿಕಾರಿಗಳು ಎಚ್ಚವಹಿಸಿ, ಬಸ್ ನಿಲುಗಡೆಗೆ ಸೂಕ್ತಕ್ರಮವಹಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಡಿಗೇರ್ ಜಿಲಾನಸಾಬ್, ಮರಿಯಣ್ಣ, ಬಸವರಾಜ, ಸತೀಶ, ಬಸಪ್ಪ, ಕಂಪ್ಲಿ ಬಸವರಾಜ, ಧನಂಜಯ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 