ಭೀಮನಭಾವಿ ಸ್ವಚ್ಛತಾ ಕಾರ್ಯಕ್ರಮ
Bhimanabhavi Cleanliness Drive
ತಾಳಿಕೋಟಿ 25: ಪಟ್ಟಣದಲ್ಲಿ ನಡೆಯುತ್ತಿರುವ ಐತಿಹಾಸಿಕ ಖಾಸ್ಗತೇಶ್ವರ ಜಾತ್ರೆಯ ನಿಮಿತ್ಯವಾಗಿ ರಾಜವಾಡೆಯಲ್ಲಿರುವ ಭೀಮನಭಾವಿಯಲ್ಲಿ ಜಾತ್ರೆಯ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಗಂಗಾಸ್ಥಳದ ಪೂಜಾ ವಿಧಿ ವಿಧಾನಗಳು ನಡೆಯಲಿರುವುದರಿಂದ ಶುಕ್ರವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಭಾವಿಯ ಸ್ವಚ್ಛತೆಯನ್ನು ಮಾಡಿದರು. ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪುರಸಭೆ ಮಾಜಿ ಸದಸ್ಯ ಜೈಸಿಂಗ್ ಮೂಲಿಮನಿ, ಶ್ರೀಪಾದ ಜೋಶಿ, ಹಿರಿಯ ಆರೋಗ್ಯ ನೀರೀಕ್ಷಕ ಶಿವು ಜುಮನಾಳ, ಕಿರಿಯ ಆರೋಗ್ಯ ನೀರೀಕ್ಷಕ ಫಿರೋಜ ಮುಲ್ಲಾ, ರಂಗನಾಥ ಅಜಮನಿ, ಲೆಕ್ಕಿಗ ಸಿದ್ದಲಿಂಗ ಚೊಂಡಿಪಾಟೀಲ, ವ್ಯವಸ್ಥಾಪಕ ಎಸ್ ಎಸ್ ಇಂಜಿಗನೇರಿ, ಆರ್.ಐ.ಶರಣಗೌಡ ಪಾಟೀಲ ಹಾಗೂ ಪೌರ ಕಾರ್ಮಿಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 