ಅಧ್ಯಕ್ಷರಾಗಿ ಭೀಮಾನಾಯ್ಕ್ ಅಧಿಕಾರ ಸ್ವೀಕಾರ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 03 : (ಬೆಂಗಳೂರು): ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಭೀಮಾನಾಯ್ಕ್ರವರು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೆಂಗಳೂರಿನ ನಿಗಮದ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿ ಹಿಂದುಳಿದ ಸಮುದಾಯದ ಬಂಜಾರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿರವರ ಜೊತೆಗೆ ಮಾತನಾಡಿ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸಕರ್ಾರ ಹಲವಾರ ಯೋಜನೆಗಳನ್ನು ಹಮ್ಮಿಕೊಂಡಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಂತೆ ಅವಿರತವಾಗಿ ಶ್ರಮಿಸುವುದಾಗಿ ತಿಳಿಸಿದರು. ಜನರ ಸೇವೆ ಮಾಡುವುದಕ್ಕೆ ಮೊದಲ ಆಧ್ಯತೆ ನೀಡಲಾಗುವುದು,ತಾಂಡಾ ಅಭಿವೃಧ್ಧಿ ನಿಗಮದ ಅಧಿಕಾರದ ಪ್ರಮಾಣಿಕ ಪ್ರಯತ್ನದ ಜೊತೆ ಪ್ರತಿಯೊಂದು ವರ್ಗಗಳ ಅಭಿವೃದ್ಧಿಗೆ ಶ್ರಮಿಸತ್ತೇನೆ ಎಂದು ಹೇಳಿದರು.
ಈ ವೇಳೆ ಜಲಾಜಾನಾಯ್ಕ, ಹೀರಾಲಾಲ್, ತಾ.ಅ.ನಿ.ಮಾಜಿ ಅಧ್ಯಕ್ಷ ಬಿ.ಬಾಲರಾಜ, ನಂದಿಹಳ್ಳಿ ಹಾಲಪ್ಪ, ಹರ್ಷವರ್ಧನ್,ಅಕ್ಕಿ ತೋಟೇಶ್,ಹೆಗ್ಡಾಳ್ ರಾಮಣ್ನ, ಕೆ. ಶಿವಮೂತರ್ಿ,ಉಪ್ಪಾರ ಬಾಲಕೃಷ್ಣ, ದೇವೇಂದ್ರಪ್ಪ, ಕಲ್ಲಿಹಳ್ಳಿ ಚಂದ್ರು, ಜೋಗಿ ಹನುಮಂತಪ್ಪ, ನೆಲ್ಲು ಇಸ್ಮಾಯಿಲ್ ಸಾಬ್, ಹೆಚ್.ಭೀಮಪ್ಪ, ಕೆ.ಜಿ.ಎನ್ ದಾದು, ನವೀನ್, ರಹಿಮಾನ್, ಆಲ್ಲಾಭಕ್ಷಿ ಇನ್ನಿತರರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 