ಅಭಿವೃದ್ದಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
Bhoomi Pooja is the faith of the MLA for the development work
ಅಭಿವೃದ್ದಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
ಯರಗಟ್ಟಿ, 02; ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಅಭಿವೃದ್ಧಿಗೆ ಬದ್ಧನಾಗಿದ್ದು, ಅಭಿವೃದ್ದಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಮಬನೂರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಯರಗಟ್ಟಿ ಯಾತ ನೀರಾವರಿ ಯೋಜನೆಯ ಇನ್ಟೆಕ್ ಮೇಲಮಟ್ಟ ಹಾಗೂ ಕೇಳ ಮಟ್ಟದ ಕಾಲುವೆ ಆಧುನಿಕರಣ ಅಭಿವೃದ್ದಿಗೆ 4.95 ಕೋಟಿ ರೂ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಫಕೀರ್ಪ ಹದ್ದನ್ನವರ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಸರಕಾರದಿಂದ ಹಲವಾರು ಯೋಜನೆಗಳು ಬಂದಿದ್ದು ಅದರ ಸದುಪಯೋಗವನ್ನು ಸಾರ್ವಜನಿಕರು ಮಾಡಿಕೊಳ್ಳಬೇಕು ಎಂದು ಹೇಳಿದರು.ಗ್ರಾಪಂ ಅಧ್ಯಕ್ಷೆ ಶಾರವ್ವ ನರಿ, ಸದಸ್ಯ ಪಡೆಪ್ಪ ನರಿ, ಕಾಂಗ್ರೆಸ ಮುಖಂಡ ಆರ್.ಕೆ.ಪಟಾತ, ಯರಗಟ್ಟಿ ಎಪಿಎಂಸಿ ಸದಸ್ಯ ಸಿದಾರೂಢ ಬೀಲಕಂಚಿ, ಹನಮಂತಗೌಡ ಪಾಟೀಲ, ಯಲ್ಲಪ್ಪ ನರಿ, ಲಕ್ಷ್ಮಣ ಹೊಟ್ಟಿನವರ, ಸಿದ್ದಪ್ಪ ಮುರಗೋಡ, ಶಟ್ಟೆಪ್ಪ ಹಡಪದ, ಗೋಪಾಲ ಮೇಟಿ, ವಕೀಲ ಯಲ್ಲಪ್ಪ ನೆರಿ, ಮಹಾದೇವ ಮುರಗೋಡ, ಈಶ್ವರ ಮೇಟಿ, ಫಕೀರ್ಪ ಹಟ್ಟಿ, ಫಕಿರ್ಪ ಹೊನಕುಪ್ಪಿ, ಪಿಡಿಒ ರಾಜೇಸಾಬ ಚಿಪ್ಪಲಕಟ್ಟಿ ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 