ರೂ. 1 ಕೋಟಿ ವೆಚ್ಚದ ಕಟ್ಟಡ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
Bhoomi Puja by MLA for construction work costing 1 crore
ಸಿಂದಗಿ 18: ಕಾಲೇಜಿನಲ್ಲಿ ಕಟ್ಟಡಗಳ ಕೊರತೆಯಿಂದ ಗ್ರಾಮೀಣ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತವಾಗಬಾರದು ಎಂದು ಇನ್ನೂ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಅನುದಾನ ತರಲಾಗಿದೆ ಕಾರಣ ಸರಕಾರಿ ಕಾಲೇಜಿನಲ್ಲಿ ಓದುವ ಪ್ರತಿಯೊಂದು ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.
ಪಟ್ಟಣದ ಪ್ರಥಮ ಧರ್ಜೆ ಕಾಲೇಜಿನಲ್ಲಿ ಎಸ್ಡಿ ಪಿ ಯೋಜನೆಯಡಿ ರೂ 1 ಕೋಟಿ ಅನುದಾನದಲ್ಲಿ ಕರ್ನಾಟಕ ಗೃಹ ಮಂಡಳಿಯವರು ಹೆಚ್ಚುವರಿ ಕೊಠಡಿಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕಾಲೇಜಿನ ಸುತ್ತಲು ಕಂಪೌಂಡ ನಿರ್ಮಿಸುವುದು ಅವಶ್ಯಕವಿದ್ದು ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಇಲಾಖೆಯಿಂದ ಬಿಡುಗಡೆಗೊಳಿಸುವುದಾಗಿ ಭರವಸೆ ನಿಡಿದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿದ್ದನಗೌಡ ಪಾಟೀಲ, ನಿವೃತ್ತ ಉಪಪ್ರಾಚಾರ್ಯ ಪ್ರಭುಲಿಂಗ ಲೋಣೀ, ಪ್ರತಿಭಾ ಚಳ್ಳಗಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಶಿವಾನಂದ ಗಣಿಹಾರ, ಕೆಡಿಪಿ ಸದಸ್ಯರಾದ ನೂರಹ್ಮದ ಅತ್ತಾರ, ಕೆಎಚ್ಬಿ ಅಭಿಯಂತ ಶಾಧಿಕ್, ಗುತ್ತಿಗೆದಾರ ವೆಂಕಟೇಶ, ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಹಳೇಮನಿ, ಸಿಬ್ಬಂದಿವರ್ಗ ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 