10 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
Bhoomi Puja for various development works costing Rs. 10 lakh
ಲೋಕದರ್ಶನ ವರದಿ
ಹಾನಗಲ್ 22 : ಬಡವರು, ಜನಸಾಮಾನ್ಯರ ಕಷ್ಟ ಅರಿತು, ಬೆಲೆ ಏರಿಕೆಯ ಬಿಸಿ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 10 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡುತ್ತಿದ್ದ ಬಿಜೆಪಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಅವೇ ಯೋಜನೆಗಳನ್ನು ನಕಲು ಮಾಡಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನಿಯಂತ್ರಿಸುವುದು ಒಂದೆಡೆ ಇರಲಿ, ಭಾರಿ ಪ್ರಮಾಣದಲ್ಲಿ ಏರಿಸಿ ಜನರನ್ನು ತೀವ್ರ ಸಮಸ್ಯೆಗೀಡು ಮಾಡಿದೆ. ಬಡಜನರ ಬದುಕಿಗೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಇದೇ ಮೊದಲ ಬಾರಿಗೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೂ ಸಹ ಮೂಲಭೂತ ಸೌಲಭ್ಯ ಹೆಚ್ಚಿಸುವ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಶಿವಾನಂದ ಕನ್ನಕ್ಕನವರ, ಶಿವಾನಂದ ಕಾಡಮ್ಮನವರ, ದಯಾನಂದ ಕನ್ನಕ್ಕನವರ, ಪ್ರಕಾಶಪ್ಪ ಲಕ್ಕೊಳ್ಳಿ, ಈರ್ಪ ಬೈಲವಾಲ ಸೇರಿದಂತೆ ಅನೇಕರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 