ಕಾಲ್ವೆಯಲ್ಲಾಪುರ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಕಾಲ್ವೆಯಲ್ಲಾಪುರ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ Bhoomi Puja for various development works in Kalveyallapuram village

ಲೋಕದರ್ಶನ ವರದಿ 

      ಹಾನಗಲ್ 28 :ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜನತೆಯ ನೆಮ್ಮದಿಯ ಬದುಕಿಗೆ ಅವಶ್ಯ ಮೂಲಸೌಕರ್ಯ ಕಲ್ಪಿಸಲು ಗಮನ ಹರಿಸಲಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿ ಕನಿಷ್ಟ 20 ಲಕ್ಷ ರೂ.ದಿಂದ ಒಂದು ಕೋಟಿ ರೂ.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು. 

      ತಾಲೂಕಿನ ಕಾಲ್ವೆಯಲ್ಲಾಪುರ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಬಾಳಂಬೀಡ ಹಿ ಚನ್ನಾಪುರ ನಡುವಿನ ರಸ್ತೆಯನ್ನು 65 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಸುತ್ತಲಿನ ಹಲವು ಗ್ರಾಮಸ್ಥರಿಗೆ ಅನುಕೂಲವಾಗಿದೆ. ಅನುದಾನ ಲಭ್ಯತೆ ಆಧರಿಸಿ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಮರ​‍್ಕ ಕುಡಿಯುವ ನೀರು ಪೂರೈಕೆಗಾಗಿ ಬಹುಗ್ರಾಮ ನದಿ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು. 

      ಮುಖಂಡರಾದ ಚಂದ್ರು ಮರೆಕ್ಕನವರ, ಭರತೇಶ ಶೇತಸನದಿ, ಚಂದ್ರಕಾಂತ ಮರೆಕ್ಕನವರ, ಗುಡ್ಡಪ್ಪ ಮಾಸನಕಟ್ಟಿ, ಉಮೇಶ ಕೋಳಿನಿಂಗಣ್ಣನವರ, ಈರಣ್ಣ ಹಿರೂರ, ನಾಗರಾಜ ಹರಿಜನ, ಜಗದೀಶ ಜಾಡರ, ಭೀರಣ್ಣ ಶೇತಸನದಿ ಸೇರಿದಂತೆ ಇನ್ನೂ ಹಲವರು ಇದ್ದರು.