ಜಿನುಗು ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲಗೌಡರಿಂದ ಭೂಮಿಪೂಜೆ
Bhoomipuja by MLA Sunil Gowda for construction work of Jinugu lake
ವಿಜಯಪುರ, ಡಿ. 09: ಅಸಾಧ್ಯವಾದ ಕೆಲಸಗಳನ್ನು ಸಾಧ್ಯ ಮಾಡುವ ಮೂಲಕ ಸಚಿವ ಎಂ. ಬಿ. ಪಾಟೀಲ ಅವರು ಸವಾಂರ್ಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂದಾಜು ರೂ. 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ(ಸೈಟ್- 3) ನಿರ್ಮಾಣ ಕಾಮಗಾರಿಗೆ ಇಂದು ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಆಲಮಟ್ಟಿ ಜಲಾಷಯದ ಎತ್ತರ ಹೆಚ್ಚಿದ ನಂತರ ಜಿಲ್ಲೆಗೆ ಮತ್ತಷ್ಟು ನೀರು ಹಂಚಿಕೆಯಾಗಲಿದ್ದು, ನೀರಾವರಿ ಕ್ಷೇತ್ರವೂ ವಿಸ್ತರಣೆಯಾಗಲಿದೆ. ನೀರಾವರಿ, ರಸ್ತೆ, ಗುಣಮಟ್ಟದ ವಿದ್ಯುತ್ ಪೂರೈಕೆ, ಶಿಕ್ಷಣ ಕ್ಶೇತ್ರದ ಸುಧಾರಣೆ ಮೂಲಕ ಎಂ. ಬಿ. ಪಾಟೀಲರು ಸವಾಂರ್ಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನರ ಜೀವನಮಟ್ಟ ಮತ್ತಷ್ಟು ಸುಧಾರಿಸಲಿದ್ದು, ರೈತರು ಆರ್ಥಿಕವಾಗಿ ಹೆಚ್ಚು ಸದೃಢರಾಗಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ, ಅಪ್ಪುಗೌಡ ಪಾಟೀಲ, ಮಹೇಶ ಗೌಡಪ್ಪಗೋಳ, ಅಲ್ಲಿಸಾಬ ಖಡಕೆ, ಪ್ರಕಾಶ ಹೂಗಾರಕರ, ಸಂಜು ಕಾಖಂಡಕಿ, ಸಂಕುಗೌಡ ಪಾಟೀಲ, ಚಂದ್ರಶೇಖರ ಸೀತಿಮನಿ, ಮಲ್ಲಿಕಾರ್ಜುನ ಪರಸನ್ನವರ, ಮಲ್ಲು ಹಿರೇಕುರಬರ, ಸುಖದೇವ ಯಕ್ಕುಂಡಿ, ಚಂದು ಸಿದರೆಡ್ಡಿ. ಗ್ರಾ. ಪಂ. ಕಾರ್ಯದರ್ಶಿ ರಫೀಕ ವಾಲಿಕಾರ, ಗ್ರಾಮದ ಹಿರಿಯರು, ಯುವಕರು ಉಪಸ್ತಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 