ಘರಾಣೆಯ ಭುಜಬಲಿ ದೇಸಾಯಿ ನಿಧನ
Bhujbali Desai
ಧಾರವಾಡ 27: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸ್ವಾತಂತ್ರ್ಯಪೂರ್ವದ ಪಾರಂಪರಿಕ ದೇಶಗತಿ ಘರಾಣೆಯ ಯಜಮಾನ ಮತ್ತು ದಿಗಂಬರ ಜೈನ್ ಸಮಾಜದ ಮುಖಂಡ ಭುಜಬಲಿ ಬಲ್ಲಾಳರಾವ ದೇಸಾಯಿ (95) ಬುಧವಾರ ನಿಧನರಾದರು.
ಮೃತರು ಪತ್ನಿ, 5 ಜನ ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ. ಬುಧವಾರ ಅಮ್ಮಿನಬಾವಿಯಲ್ಲಿ ಗ್ರಾಮ ಪರಂಪರೆಯ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಶೋಕ : ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯರು ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯರು, ವರೂರು ನವಗ್ರಹ ತೀರ್ಥದ ಶ್ರೀಧರ್ಮಸೇನ ಭಟ್ಟಾರಕ ಪಟ್ಟದಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ವಿನಯ ಕುಲಕರ್ಣಿ, ಮಾಜಿ ಶಾಸಕರುಗಳಾದ ಎ.ಬಿ. ದೇಸಾಯಿ, ಅಮೃತ ದೇಸಾಯಿ, ಸೀಮಾ ಮಸೂತಿ, ಜೈನ್ ಸಮಾಜವೂ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ತೀವ್ರ ಶೋಕವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 