ಘರಾಣೆಯ ಭುಜಬಲಿ ದೇಸಾಯಿ ನಿಧನ
Bhujbali Desai
ಧಾರವಾಡ 27: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸ್ವಾತಂತ್ರ್ಯಪೂರ್ವದ ಪಾರಂಪರಿಕ ದೇಶಗತಿ ಘರಾಣೆಯ ಯಜಮಾನ ಮತ್ತು ದಿಗಂಬರ ಜೈನ್ ಸಮಾಜದ ಮುಖಂಡ ಭುಜಬಲಿ ಬಲ್ಲಾಳರಾವ ದೇಸಾಯಿ (95) ಬುಧವಾರ ನಿಧನರಾದರು.
ಮೃತರು ಪತ್ನಿ, 5 ಜನ ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ. ಬುಧವಾರ ಅಮ್ಮಿನಬಾವಿಯಲ್ಲಿ ಗ್ರಾಮ ಪರಂಪರೆಯ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಶೋಕ : ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯರು ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯರು, ವರೂರು ನವಗ್ರಹ ತೀರ್ಥದ ಶ್ರೀಧರ್ಮಸೇನ ಭಟ್ಟಾರಕ ಪಟ್ಟದಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ವಿನಯ ಕುಲಕರ್ಣಿ, ಮಾಜಿ ಶಾಸಕರುಗಳಾದ ಎ.ಬಿ. ದೇಸಾಯಿ, ಅಮೃತ ದೇಸಾಯಿ, ಸೀಮಾ ಮಸೂತಿ, ಜೈನ್ ಸಮಾಜವೂ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ತೀವ್ರ ಶೋಕವ್ಯಕ್ತಪಡಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 