ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ವಿಜಯಪುರ 19: ಬಬಲೇಶ್ವರ ಮತಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಭೂತ ಸೌಕರ್ಯ, ಶಿಕ್ಷಣ, ಗುಣಮಟ್ಟದ ವಿದ್ಯುತ್ ಪೂರೈಕೆ, ಕೈಗಾರಿಕೆಗೆ ಉತ್ತೇಜನಕ್ಕೆ ಒತ್ತು ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.   

ಇಂದು ಶನಿವಾರ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್‌.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ನಂತರ ತಿಕೋಟಾ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿ ನಡೆದ ಕಾರ್ಯಕ್ರಮದಲ್ಲಿ ಕೆ.ಆರ್‌.ಐ.ಡಿ.ಎಲ್ ವತಿಯಿಂದ ತಲಾ ರೂ. 50 ಲಕ್ಷ ವೆಚ್ಚದಲ್ಲಿ ಪಟ್ಟಣದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಮತ್ತು ಗೈರಾಣ ಕಾಲನಿಯ ಅಲ್ಪಸಂಖ್ಯಾತರ ಪ್ರದೇಶದಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಪ. ಪಂ. ವತಿಯಿಂದ ರೂ 112.23 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.  

ತಿಕೋಟಾದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಸವಾಂರ್ಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ.  ವಾರ್ಡವಾರು ಬೇಡಿಕೆಗಳನ್ನು ಕ್ರೂಢಿಕರಿಸಿ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ವರದಿ ನೀಡಬೇಕು ಎಂದು ಪ.ಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿಯ ಮಾದರಿಯಲ್ಲಿ ಶಿಕ್ಷಣ, ಕೈಗಾರಿಕೆ, ವಿದ್ಯುತ್ ಹಾಗೂ ಮೂಲಭೂತ ಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು. 

ಇದಕ್ಕೂ ಮುನ್ನ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್‌.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಬಬಲೇಶ್ವರ ಮತಕ್ಷೇತ್ರದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ನಾನಾ ಕೈಗಾರಿಕೋದ್ಯಮಿಗಳಿಂದ ಸಿ.ಎಸ್‌.ಆರ್ ಅನುದಾನದಲ್ಲಿ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಂಡಿದ್ದಾರೆ.  ಈ ಮೂಲಕ ಗ್ರಾಮೀಣ ಭಾಗದಲ್ಲಿ ಕಾನ್ವೆಂಟ್ ಮಾದರಿಯಲ್ಲಿ ಶಿಕ್ಷಣ ಒದಗಿಸುತ್ತಿದ್ದಾರೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು. 

ಶಾಲಾ ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಲಾಯಿತು. 

ಹೊನವಾಡ ಕಾರ್ಯಕ್ರಮದಲ್ಲಿ ಮುಖಂಡರಾದ ರಾಮಗೊಂಡ ಚಾವರ, ಸಿದ್ದು ಬೆಳಗಾವಿ, ವಿಜಯಕುಮಾರ ಹಿರೇಮಠ, ಅಕ್ಬರ ತಿಕೋಟಿ, ಸಾಬು ಖಂಡೇಕಾರ, ದುಂಡಪ್ಪ ವಾಲಿಕಾರ, ಶ್ರೀಕಾಂತ ಕುಂಬಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಪಿಡಿಓ ಶೋಭಾ ಸೀಳೀನ, ತಿಕೋಟಾ ಪಟ್ಟಣದ ಕಾರ್ಯಕ್ರಮದಲ್ಲಿ ಮುಖಂಡರಾದ ವಿಜುಗೌಡ ಪಾಟೀಲ, ಆರ್‌. ಬಿ. ದೇಸಾಯಿ, ಭೀಮು ಹಂಗರಗಿ, ಸಂತೋಷ ಕೋಲಾರ, ಮಲ್ಲಿಕಾರ್ಜುನ ಹಂಜಗಿ, ಬಸಯ್ಯಾ ವಿಭೂತಿಮಠ, ಭಾಗೀರಥಿ ತೇಲಿ, ಮಮ್ಮು ಮುಜಾವರ, ಲೇಪು ಕೊಣ್ಣೂರ, ಹಾಜಿಬಾ ಕೋಟ್ಟಲಗಿ, ರಾಜಕುಮಾರ ಸುಣಗಾರ, ಪಂ. ಪಂ. ಅಧಿಕಾರಿ ರಾಘವೇಂದ್ರ ನಡುವಿನಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.