ಬೀಬಿಆಯಿಷಾಗೆ ರಾಜ್ಯ ಮಟ್ಟದ ಪ್ರತಿಭಾ ಪ್ರಶಸ್ತಿ
Bibi Aisha gets state-level talent award
ಧಾರವಾಡ 18: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 7ನೆಯ ತರಗತಿಯ ವಿದ್ಯಾರ್ಥಿನಿ ಬೀಬಿಆಯಿಷಾ ಮಕ್ತುಂಹುಸೇನ ಪಠಾಣ ಅವಳಿಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕ ಕೊಡಮಾಡುವ 2025ನೆಯ ವರ್ಷದ ‘ರಾಜ್ಯ ಮಟ್ಟದ ಆದರ್ಶ ವಿದ್ಯಾರ್ಥಿನಿ ಪ್ರತಿಭಾ ಪ್ರಶಸ್ತಿ’ ಲಭಿಸಿದೆ.
ಇತ್ತೀಚೆಗೆ ರಾಣೆಬೆನ್ನೂರು ನಗರದ ಮೃತ್ಯುಂಜಯ ಸಭಾಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಹನುಮಂತಪ್ಪ, ರಾಜ್ಯಾಧ್ಯಕ್ಷ ರಾಜಗೋಪಾಲ್, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಭೀಮಪ್ಪ ಮಲ್ಲಿಗವಾಡ ಹಾಗೂ ಧಾರವಾಡ ಗ್ರಾಮೀಣ ತಾಲೂಕಾ ಅಧ್ಯಕ್ಷ ಆಂಜನೇಯ ಎಂ. ಇದ್ದರು.
ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಬೀಬಿಆಯಿಷಾಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವದಿಸಿ ಈ ಸಾಧನೆ ನಿರಂತರವಾಗಿರಲಿ ಎಂದು ಸಲಹೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 