ರಾಹುಲ್ಗಾಂಧಿ ನಿರ್ಗಮನ ಪಕ್ಷಕ್ಕೆ ದೊಡ್ಡ ಹೊಡೆತ: ಸಲ್ಮಾನ್ ಖುರ್ಷಿದ್
ನವದೆಹಲಿ, ಅ, 9: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನಕ್ಕೆ ಮುನ್ನವೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ಗಾಂಧಿ ರಾಜೀನಾಮೆ ನೀಡಿ ಹೊರ ಹೋಗಿದ್ದು, ಪಕ್ಷಕ್ಕ ದೊಡ್ಡ ಹೊಡೆತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ಗಾಂಧಿ ರಾಜೀನಾಮೆ ನೀಡುವ ಮೂಲಕ ಸೋಲಿನಿಂದ ಪಲಾಯನವಾದ ಮಾಡಿದ್ದಾರೆ. ಇದರಿಂದಾಗಿ ಚುನಾವಣೆಯಲ್ಲಿ ಉಂಟಾದ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನಕ್ಕೆ ಅವಕಾಶವೂ ಸಿಗಲಿಲ್ಲ ಎಂದು ಅವರು ಅಸಮಾಧಾನ ಹೊರ ಹಾಕಿದರು.
ಬಿಜೆಪಿಯಿಂದ ಹೀನಾಯ ಸೋಲು ಕಂಡ ಬಳಿಕ ಪಕ್ಷದ ಸ್ಥಿತಿಗತಿ ಬಗ್ಗೆ ವಿವರಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಏಕೆ ಸೋಲಾಯಿತು ಎನ್ನುವುದನ್ನು ನಾವು ವಿವರವಾಗಿ ಮತ್ತು ವಸ್ತುನಿಷ್ಠವಾಗಿ, ವಾಸ್ತವವಾಗಿ ವಿಶ್ಲೇಷಣೆ ಮಾಡಲೇ ಇಲ್ಲ, ಇದಕ್ಕೆ ಮುಖ್ಯ ಕಾರಣ ಎಂದರೆ ನಾಯಕ ಹೊರ ಹೋಗಿದ್ದು ಎಂದು ಹೇಳಿದ್ದಾರೆ.
ಸೋಲಿನ ಹೊಣೆಹೊತ್ತು ರಾಹುಲ್ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಅಂತಹ ನಿರ್ಧಾರ ತೆಗೆದುಕೊಳ್ಳುವಾಗ ಹುದ್ದೆಯಲ್ಲಿ ಮುಂದುವರಿದು ಸಂಘಟನೆಗೆ ಹೊಸ ಹುಟ್ಟು ನೀಡಬೇಕು ಎಂದು ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಮಾಡಿಕೊಂಡ ಮನವಿಯನ್ನು ಅವರು ಕಡೆಗಣಿಸಿದ ಬಗ್ಗೆಯೂ ಅವರು ಅಸಮಾಧಾನ ಹೊರಹಾಕಿದರು.
ರಾಹುಲ್ ರಾಜೀನಾಮೆಯನ್ನು ಪಲಾಯನವಾದ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಲೇವಡಿಯ ರೀತಿಯಲ್ಲಿ ಹೇಳಿರುವುದು ಇದೇ ಮೊದಲು ಎನ್ನಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 