ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರಿದ ಮುನವಳ್ಳಿಯ ಹಿರಿಯ ನಾಯಕ ದುಂಡಪ್ಪ ಬುರ್ಜಿ
Big shock for BJP: Senior Munavalli leader Dundappa Burji joins Congress
ಲೋಕದರ್ಶನ ವರದಿ
ಸವದತ್ತಿ 16: ತಾಲೂಕಿನ ಮುನವಳ್ಳಿ ಭಾಗದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ಹಿರಿಯ ರಾಜಕಾರಣಿ ಹಾಗೂ ಸಂಘಟನಾ ಚತುರ ದುಂಡಪ್ಪ ಬುರ್ಜಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಯಾಗಿದ್ದಾರೆ. ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ನಿವಾಸದಲ್ಲಿ ನಡೆದ ಈ ಸೇರೆ್ಡ ಕಾರ್ಯಕ್ರಮವು ಅವರು ಮಾತನಾಡಿ ಮುನವಳ್ಳಿ ಭಾಗದ ರಾಜಕೀಯ ಸಮೀಕರಣಗಳಲ್ಲಿ ಮಹತ್ತರ ಬದಲಾವಣೆಗೆ ನಾಂದಿ ಹಾಡಿದೆ. ಅನುಭವಿ ನಾಯಕತ್ವ ದುಂಡಪ್ಪ ಬುರ್ಜಿ ಅವರು ಈ ಹಿಂದೆ ಮುನವಳ್ಳಿ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಪಕ್ಷಕ್ಕೆ ಆನೆಬಲ ಇವರ ಸೇರೆ್ಡಯಿಂದ ಮುನವಳ್ಳಿ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ.ಅಭಿವೃದ್ಧಿಯ ಮಂತ್ರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಮಾಡಲಾಯಿತು.ದುಂಡಪ್ಪ ಬುರ್ಜಿ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯ ಮನೋಭಾವವು ನಮ್ಮ ಪಕ್ಷಕ್ಕೆ ದೊಡ್ಡ ಬಲ ತಂದಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ ಎಂದರು. ಈ ವೇಳೆ ಚಂದ್ರು ಜಂಬ್ರಿ, ಮಲ್ಲು ಜಕಾತಿ, ಮಂಜುನಾಥ ಪಾಚಾಂಗಿ, ಸಿ.ಬಿ.ಬಾಳಿ, ಪ್ರವೀಣ್ ರಾಮಪ್ಪನವರ, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 