ಬಿಹಾರ ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ: ರಾಹುಲ್ ಗಾಂಧಿ
Bihar is the criminal capital of India: Rahul Gandhi
ರಾಜಗೀರ್ 06: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಹಾರ ‘ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ’ಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಶುಕ್ರವಾರ ನಳಂದದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬಿಹಾರವು ಒಂದು ಕಾಲದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಸರಾಗಿತ್ತು. ಇದೀಗ ಅಪರಾಧಿ ಚಟುವಟಿಕೆಗಳ ತಾಣವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗ, ದಲಿತರು ಹಾಗೂ ಬುಡಕಟ್ಟು ಅಧಿಕಾರಿಗಳು ಇಲ್ಲದೇ ಜಾತಿಗಣತಿಯ ಪ್ರಶ್ನೆಗಳನ್ನು ತಯಾರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜಾತಿಗಣತಿ ವರದಿಯ ಕುರಿತು ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಸಂವಿಧಾನ ಉಳಿಸಲು ಹಾಗೂ ದೇಶದ ಅಭಿವೃದ್ಧಿಗಾಗಿ ನಾನು ಜಾತಿಗಣತಿಗಾಗಿ ಹೋರಾಡುತ್ತೇನೆ. ನಾವು ಮುಂದೊಂದು ದಿನ ಸರ್ಕಾರವನ್ನು ರಚಿಸಿದರೆ, ಶೇ.50ರಷ್ಟು ಮಾತ್ರ ಮೀಸಲಾತಿ ನೀಡಬೇಕು ಎನ್ನುವ ನಿಯಮದಲ್ಲಿ ಬದಲಾವಣೆ ತರುತ್ತೇವೆ. ಇದು ಬಿಹಾರದಿಂದಲೇ ಶುರುವಾಗಲಿದೆ’ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 