ಬಿಹಾರ ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ: ರಾಹುಲ್ ಗಾಂಧಿ
Bihar is the criminal capital of India: Rahul Gandhi
ರಾಜಗೀರ್ 06: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಹಾರ ‘ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ’ಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಶುಕ್ರವಾರ ನಳಂದದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬಿಹಾರವು ಒಂದು ಕಾಲದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಸರಾಗಿತ್ತು. ಇದೀಗ ಅಪರಾಧಿ ಚಟುವಟಿಕೆಗಳ ತಾಣವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗ, ದಲಿತರು ಹಾಗೂ ಬುಡಕಟ್ಟು ಅಧಿಕಾರಿಗಳು ಇಲ್ಲದೇ ಜಾತಿಗಣತಿಯ ಪ್ರಶ್ನೆಗಳನ್ನು ತಯಾರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜಾತಿಗಣತಿ ವರದಿಯ ಕುರಿತು ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಸಂವಿಧಾನ ಉಳಿಸಲು ಹಾಗೂ ದೇಶದ ಅಭಿವೃದ್ಧಿಗಾಗಿ ನಾನು ಜಾತಿಗಣತಿಗಾಗಿ ಹೋರಾಡುತ್ತೇನೆ. ನಾವು ಮುಂದೊಂದು ದಿನ ಸರ್ಕಾರವನ್ನು ರಚಿಸಿದರೆ, ಶೇ.50ರಷ್ಟು ಮಾತ್ರ ಮೀಸಲಾತಿ ನೀಡಬೇಕು ಎನ್ನುವ ನಿಯಮದಲ್ಲಿ ಬದಲಾವಣೆ ತರುತ್ತೇವೆ. ಇದು ಬಿಹಾರದಿಂದಲೇ ಶುರುವಾಗಲಿದೆ’ಎಂದು ತಿಳಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 