ಬಿಹಾರ ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ: ರಾಹುಲ್ ಗಾಂಧಿ
Bihar is the criminal capital of India: Rahul Gandhi
ರಾಜಗೀರ್ 06: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಹಾರ ‘ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ’ಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಶುಕ್ರವಾರ ನಳಂದದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬಿಹಾರವು ಒಂದು ಕಾಲದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಸರಾಗಿತ್ತು. ಇದೀಗ ಅಪರಾಧಿ ಚಟುವಟಿಕೆಗಳ ತಾಣವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗ, ದಲಿತರು ಹಾಗೂ ಬುಡಕಟ್ಟು ಅಧಿಕಾರಿಗಳು ಇಲ್ಲದೇ ಜಾತಿಗಣತಿಯ ಪ್ರಶ್ನೆಗಳನ್ನು ತಯಾರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜಾತಿಗಣತಿ ವರದಿಯ ಕುರಿತು ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಸಂವಿಧಾನ ಉಳಿಸಲು ಹಾಗೂ ದೇಶದ ಅಭಿವೃದ್ಧಿಗಾಗಿ ನಾನು ಜಾತಿಗಣತಿಗಾಗಿ ಹೋರಾಡುತ್ತೇನೆ. ನಾವು ಮುಂದೊಂದು ದಿನ ಸರ್ಕಾರವನ್ನು ರಚಿಸಿದರೆ, ಶೇ.50ರಷ್ಟು ಮಾತ್ರ ಮೀಸಲಾತಿ ನೀಡಬೇಕು ಎನ್ನುವ ನಿಯಮದಲ್ಲಿ ಬದಲಾವಣೆ ತರುತ್ತೇವೆ. ಇದು ಬಿಹಾರದಿಂದಲೇ ಶುರುವಾಗಲಿದೆ’ಎಂದು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 