ಬಸ್ಗೆ ಬೈಕ್ ಮುಖಾಮುಖಿ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ
Bike collides head-on with bus: Person seriously injured
ಲೋಕದರ್ಶನ ವರದಿ
ಜಮಖಂಡಿ 19: ನಗರದ ವಿಜಯಪುರ ರಸ್ತೆಯ ಶಾಂತಿ ಬಾರ್ ಹತ್ತಿರ ಕೆಎಸ್ಆರ್ಟಿಸಿ ಬಸ್ಗೆ ಹಾಗೂ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವನು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಮಖಂಡಿಯಿಂದ ವಿಜಯಪುರ ಕಡೆಗೆ ಹೊರಟಿರುವ ಹುಬ್ಬಳ್ಳಿ, ವಿಜಯಪುರ ಬಸ್ ಹಾಗೂ ವಿಜಯಪುರ ಕಡೆಯಿಂದ ಜಮಖಂಡಿ ಕಡೆಗೆ ಬರುತ್ತಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡಿದಿದ್ದು. ಬೈಕ್ ಬಸ್ಸಿನ ಕೆಳಭಾಗಕ್ಕೆ ಸಿಲಿಕಿಕೊಂಡಿದ್ದು. ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ಪ್ರಾಣಾಪಾಯದಿಂದ ಉಳಿದಿರುವ ಘಟನೆ ಸಂಭವಿಸಿದೆ.
ಬೈಕ್ ಸವಾರ ಅಥಣಿ ತಾಲೂಕಿನ ಸಂತಿಊರ ಗ್ರಾಮದ ಬಸವರಾಜ ಹನುಮಂತ ಮಡಿವಾಳರ (33) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ವ್ಯಕ್ತಿ ಬದುಕುಳಿದಿರುತ್ತಾನೆ. ಬಸವರಾಜ ಹನುಮಂತ ಮಡಿವಾಳರನಿಗೆ ಕೈ ಭಾಗಕ್ಕೆ ಹಾಗೂ ಕಾಲಿಗೆ ಗಂಭೀರವಾದ ಪೆಟ್ಟಾಗಿದ್ದು. 108 ವಾಹನದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 