ಬಸ್ಗೆ ಬೈಕ್ ಮುಖಾಮುಖಿ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ
Bike collides head-on with bus: Person seriously injured
ಲೋಕದರ್ಶನ ವರದಿ
ಜಮಖಂಡಿ 19: ನಗರದ ವಿಜಯಪುರ ರಸ್ತೆಯ ಶಾಂತಿ ಬಾರ್ ಹತ್ತಿರ ಕೆಎಸ್ಆರ್ಟಿಸಿ ಬಸ್ಗೆ ಹಾಗೂ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವನು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಮಖಂಡಿಯಿಂದ ವಿಜಯಪುರ ಕಡೆಗೆ ಹೊರಟಿರುವ ಹುಬ್ಬಳ್ಳಿ, ವಿಜಯಪುರ ಬಸ್ ಹಾಗೂ ವಿಜಯಪುರ ಕಡೆಯಿಂದ ಜಮಖಂಡಿ ಕಡೆಗೆ ಬರುತ್ತಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡಿದಿದ್ದು. ಬೈಕ್ ಬಸ್ಸಿನ ಕೆಳಭಾಗಕ್ಕೆ ಸಿಲಿಕಿಕೊಂಡಿದ್ದು. ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ಪ್ರಾಣಾಪಾಯದಿಂದ ಉಳಿದಿರುವ ಘಟನೆ ಸಂಭವಿಸಿದೆ.
ಬೈಕ್ ಸವಾರ ಅಥಣಿ ತಾಲೂಕಿನ ಸಂತಿಊರ ಗ್ರಾಮದ ಬಸವರಾಜ ಹನುಮಂತ ಮಡಿವಾಳರ (33) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ವ್ಯಕ್ತಿ ಬದುಕುಳಿದಿರುತ್ತಾನೆ. ಬಸವರಾಜ ಹನುಮಂತ ಮಡಿವಾಳರನಿಗೆ ಕೈ ಭಾಗಕ್ಕೆ ಹಾಗೂ ಕಾಲಿಗೆ ಗಂಭೀರವಾದ ಪೆಟ್ಟಾಗಿದ್ದು. 108 ವಾಹನದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 