ಬಸ್ಗೆ ಬೈಕ್ ಮುಖಾಮುಖಿ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ
Bike collides head-on with bus: Person seriously injured
ಲೋಕದರ್ಶನ ವರದಿ
ಜಮಖಂಡಿ 19: ನಗರದ ವಿಜಯಪುರ ರಸ್ತೆಯ ಶಾಂತಿ ಬಾರ್ ಹತ್ತಿರ ಕೆಎಸ್ಆರ್ಟಿಸಿ ಬಸ್ಗೆ ಹಾಗೂ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವನು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಮಖಂಡಿಯಿಂದ ವಿಜಯಪುರ ಕಡೆಗೆ ಹೊರಟಿರುವ ಹುಬ್ಬಳ್ಳಿ, ವಿಜಯಪುರ ಬಸ್ ಹಾಗೂ ವಿಜಯಪುರ ಕಡೆಯಿಂದ ಜಮಖಂಡಿ ಕಡೆಗೆ ಬರುತ್ತಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡಿದಿದ್ದು. ಬೈಕ್ ಬಸ್ಸಿನ ಕೆಳಭಾಗಕ್ಕೆ ಸಿಲಿಕಿಕೊಂಡಿದ್ದು. ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ಪ್ರಾಣಾಪಾಯದಿಂದ ಉಳಿದಿರುವ ಘಟನೆ ಸಂಭವಿಸಿದೆ.
ಬೈಕ್ ಸವಾರ ಅಥಣಿ ತಾಲೂಕಿನ ಸಂತಿಊರ ಗ್ರಾಮದ ಬಸವರಾಜ ಹನುಮಂತ ಮಡಿವಾಳರ (33) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ವ್ಯಕ್ತಿ ಬದುಕುಳಿದಿರುತ್ತಾನೆ. ಬಸವರಾಜ ಹನುಮಂತ ಮಡಿವಾಳರನಿಗೆ ಕೈ ಭಾಗಕ್ಕೆ ಹಾಗೂ ಕಾಲಿಗೆ ಗಂಭೀರವಾದ ಪೆಟ್ಟಾಗಿದ್ದು. 108 ವಾಹನದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 