ಬೈಕ ಕಳ್ಳತನ ಮಾಡಿದ ಆರೋಪಿ ಬಂಧನ
Bike theft suspect arrested
ಮುಂಡಗೋಡ 13 : ಪಟ್ಟಣ ಪಂಚಾಯತ ಹತ್ತಿರ ಇರುವ ನೌಕರ ಭವನದ ಹತ್ತಿರ ಪ್ಲಾಟಿನ ಬೈಕ ಕಳ್ಳತನ ಮಾಡಿದ ವ್ಯಕ್ತಿಯೊಬ್ಬನನ್ನು ಇಲ್ಲಿಯ ಪೋಲಿಸರು ಗುರುವಾರ ಬಂಧಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ ಅರೋಪಿ ಯಲ್ಲಾಪುರ ತಾಲೂಕಿನ ಮಂಚಿಕೇರಿ ನಾಸಿರ್ ಅಹಮ್ಮದ ಇಮಾಮಸಬಾ ಸೈಯದ್ ಸಿದ್ದಿ ( 38). ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣ ಪಂಚಾಯತ್ ಸಭಾಭವನದ ಹತ್ತಿರ ನಿಲ್ಲಿಸಿದ್ದ ಪ್ಲಾಟಿನ್ ಬೈಕನ್ನು ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಮುತ್ತಣ್ಣ ರಾಮಣ್ಣ ಭೋವಿ ಎಂಬುವರ ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಎಸ್ಪಿ ಎಂ. ನಾರಾಯಣ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ. ಮತ್ತು ಜಗದೀಶ ನಾಯ್ಕ, ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ರಂಗನಾಥ ನೀಲಮ್ಮನವರ, ಕ್ರೈಂ ಪಿಎಸ್ಐ ವಿನೋದ ಎಸ್.ಕೆ ಪಿ.ಎಸ್.ಐ. ಪರಶುರಾಮ ಮಿರ್ಜಗಿ, ಹಾಗೂ ಸಿಬ್ಬಂದಿಗಳಾದ ಮಂಜು ಚಿಂಚಲಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ತಿರುಪತಿ ಚೌಡಣ್ಣನವರ, ಬಸವರಾಜ ಲಂಬಾಣಿ ಮುಂಡಗೋಡ ಪೊಲೀಸ್ ಠಾಣೆ, ಹಾಗೂ ಟೇಕ್ನಿಕಲ್ ಸೇಲ್ ಕಾರವಾರದ ಸಿಬ್ಬಂದಿಗಳಾದ ಉದಯ ಗುನಗಾರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 