ಕಾರಂಜಿಮಠದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ
Birth anniversary of Vishwaguru Basavanna celebrated at Karanji Math
ಬೆಳಗಾವಿ 01 : ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 299ನೇ ಶಿವಾನುಭವ ಹಾಗೂ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮವು ಸೋಮವಾರ ದಿನಾಂಕ 4 ಮೇ 2026 ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಹಿರಿಯ ವೈದ್ಯರೂ ವಿಶ್ರಾಂತ ಪ್ರಾಚಾರ್ಯರೂ ಆದ ಡಾ. ಎಚ್. ಬಿ. ರಾಜಶೇಖರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜೆ.ಎನ್.ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅವಿನಾಶ್ ಕವಿ ಅವರು ಆಗಮಿಸಿ "ವಿಶ್ವಗುರು ಬಸವಣ್ಣನವರ ಬಹುಮುಖ ವ್ಯಕ್ತಿತ್ವ" ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 