ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿಪುಲೆ ಜಯಂತ್ಯೋತ್ಸವ
Birth anniversary of the first woman teacher Savitri Baipule
ಕಂಪ್ಲಿ 04 : ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿ(ಸಕ್ಕರೆ ಕಾರ್ಖಾನೆ ಬಳಿ)ಯ ಪ್ರಭುಕ್ಯಾಂಪಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೋಷಕರ ಸಭೆ ಹಾಗೂ ಸಾವಿತ್ರಿ ಬಾಯಿಪುಲೆ ಜಯಂತ್ಯೋತ್ಸವ ನಡೆಯಿತು ಈಸಂದರ್ಭದಲ್ಲಿ ಸಮಾಜದ ಅಂಕು- ಡೊಂಕುಗಳನ್ನು ತಿದ್ದಲು ಪ್ರಮುಖ ಅಸ್ತ್ರ ಶಿಕ್ಷಣ ಎಂಬುದನ್ನು ಅರಿತಿದ್ದ ಸಾವಿತ್ರಿ ಬಾಯಿ ಫುಲೆ ಅವರು ಅಕ್ಷರ ಜ್ಞಾನದಿಂದ ವಂಚಿತರಾಗಿದ್ದ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿಕೊಟ್ಟ ಮೊದಲ ಮಹಿಳಾ ಶಿಕ್ಷಕಿ ಹಾಗೂ ಸಮಾಜ ಸುಧಾರಕರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅವರು ಅಂದೇ ಭದ್ರ ಬುನಾದಿ ಹಾಕಿದವರು.
ಅವರ ಶ್ರಮವೇ ಇಂದು ಹೆಣ್ಣಮಕ್ಕಳು ಉನ್ನತ ವ್ಯಾಸಂಗ ಪಡೆದು, ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಸಾಧ್ಯವಾಗಿದೆ. ಅವರು ಶಾಲೆಗೆ ಹೊಗುವುದನ್ನು ನೋಡಿ ಅನೇಕ ತೊಂದರೆಯನ್ನು ಕೊಟ್ರುರು ಸಹ ಪತಿಯ ಸಹಕಾರದಿಂದ ಶಿಕ್ಷಣ ಕಲಿತು ಶಿಕ್ಷಕಿಯಾದರು ಬಾಲ್ಯ ವಿವಾಹ ವಿರುದ್ದ ಹೊರಾಟ ಮಾಡಿದರು ತಾಯಂದಿರು ಮಕ್ಕಳ ಕೈಯಲ್ಲಿ ಮೊಬೈಲ್ ಕೂಡುವ ಬದಲು ಪುಸ್ತಕ ಕೊಟ್ಟಾಗ ಮಾತ್ರ ಜ್ಞಾನ ಸಂಪಾದನೆಯಾಗುತ್ತದೆ ಮಕ್ಕಳನ್ನು ತಪ್ಪದೇ ಶಾಲೆಗೆ ಕಳಹಿಸಿ ಉಚಿತವಾಗಿ ಸರ್ಕಾರದ ಸೌಲಭ್ಯ ಪಡೆಯಿರಿ ಸಾರ್ವಜನಿಕರ ಸಹಕಾರದಿಂದ ಬಾಲ್ಯ ವಿವಾಹವನ್ನು ತಡೆಗಟ್ಟುಲು ಸಾಧ್ಯ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.
ಇದರ ಜೊತೆಗೆ ಸಾವಿತ್ರಿಬಾಯಿಪುಲೆ ಸೇರಿದಂತೆ ಇತರೆ ಸಾಧಕರ ಜೀವನ ಚರಿತ್ರೆಯನ್ನು ಅರಿತುಕೊಳ್ಳಲು ಮುಂದಾಗಬೇಕು ಎಂದರು.ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ, ಸಹ ಶಿಕ್ಷಕ ಪಿ.ವೀರಕುಮಾರ, ಪೋಷಕರಾದ ಜಗದೀಶ, ನಂದಿನಿ, ಲಿಂಗಮ್ಮ, ತನುಜಾ, ಲಕ್ಷ್ಮೀ, ಅಂಜಿನಮ್ಮ, ಖಂಡೆ ಜಡೆಪ್ಪ, ಮೋಹನರಾವ್, ಕೋಳೂರು ಬಸವ, ಬಾಬು ಸೇರಿದಂತೆ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 