ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸುರೇಂದ್ರ ದಾನಿ ಅವರ ಜನ್ಮ ಶತಮಾನೋತ್ಸವ
Birth centenary of Tissar Award-winning journalist Surendra Dani
ಹುಬ್ಬಳ್ಳಿ 30: ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸುರೇಂದ್ರ ದಾನಿ ಅವರ ಜನ್ಮ ಶತಮಾನೋತ್ಸವ (1925-2025) ನಿಮಿತ್ ಸುರೇಂದ್ರ ದಾನಿ ಜನ್ಮ ಶತಮಾನೋತ್ಸವ ಸಮಿತಿಯವರು ಆಯೋಜಿಸಿದ್ದ ಸಮಾರಂಭದಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಅಮೋಘ ಸೇವೆ ಸಲ್ಲಿಸಿದ್ದ, ಶ್ರೇಷ್ಠ ಪತ್ರಕರ್ತರಾಗಿದ್ದ, ಮೃದು ಭಾಷೆಯ, ಸೌಮ್ಯ ಸ್ವಭಾವ ಹೊಂದಿದ್ದ, ಪತ್ರಿಕಾ ವೃತಿಗೆ ಮೌಲ್ಯ ತಂದು ಕೊಟ್ಟಂತಹ ಪರಮಪೂಜ್ಯರಾದ ಸುರೇಂದ್ರ ಭೀಮರಾವ್ ದಾನಿ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ, ಪುಷ್ಾರೆ್ಪಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.
ಹಿರಿಯರು, ಸರಳ ಸಜ್ಜನ ರಾಜಕಾರಣಿ ಲಿಂಗರಾಜ ಪಾಟೀಲ, ಹಿರಿಯರು, ಪತ್ರಕರ್ತ ಅರುಣಕುಮಾರ ಹಬ್ಬು, ವಾಣಿಜ್ಯ ತೇರಿಗೆ ಇಲಾಖೆ ಅಧಿಕಾರಿ ಆರ್.ಎಮ್.ಗೋಗೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಬಸವಕುಮಾರ ತಲವಾಯಿ, ಅಂಬರೀಶ್ ಹಾನಗಲ್, ಸುಜ್ಞಾನ ದಾನಿ, ಅರುಣ ದಾನಿ, ಅಶೋಕ ದಾನಿ, ಗೀರೀಶ ಪಟ್ಟಣಶೆಟ್ಟಿ, ಅಮೃತ್, ಮುಂತಾದವರು ಇದ್ದರು. ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಸುರೇಂದ್ರ ದಾನಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದನ್ನು ನೆನಪಿಸಿದ್ದಾರೆ. ತಮ್ಮ ತಂದೆಯವರು ಹಾಗೂ ಸುರೇಂದ್ರ ದಾನಿಯವರು ಬಹಳ ಪರಿಚಯ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 