ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಅಂಗವಾಗಿ ಅಯ್ಯಾಚಾರ
Birth centenary program of Mahalingeshwara Swamiji
ಲೋಕದರ್ಶನ ವರದಿ
ಮಹಾಲಿಂಗಪುರ 25: ‘ಪಟ್ಟಣದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುಲಿಂಗೇಶ್ವರ ಸ್ವಾಮೀಜಿ ಪುಣ್ಯಾರಾಧನೆ ಅಂಗವಾಗಿ ಮೇ 6 ರಂದು ಮಹಾಲಿಂಗೇಶ್ವರ ಸಂಸ್ಥಾನಮಠದಲ್ಲಿ ಜಂಗಮ ವಟುಗಳಿಗೆ ಅಯ್ಯಾಚಾರ, ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಗುರುಪಾದಯ್ಯ ಚಟ್ಟಿಮಠ ಹೇಳಿದರು.
ಈ ಕುರಿತು ಮಂಗಳವಾರ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿ, ‘ಅಂದು ಬೆಳಿಗ್ಗೆ 6 ಗಂಟೆಗೆ ಗುರುಲಿಂಗೇಶ್ವರ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ, 7 ಗಂಟೆಗೆ ಜಂಗಮ ವಟುಗಳಿಗೆ ಅಯ್ಯಾಚಾರ ನಡೆಯಲಿದೆ. 10 ಗಂಟೆಗೆ ನಡೆಯುವ ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮದ ಸಾನಿಧ್ಯವನ್ನು ಚಿಪ್ಪಲಕಟ್ಟಿಯ ಸಿದ್ಧಲಿಂಗ ಶಿವಾಚಾರ್ಯರು ವಹಿಸುವರು. ಗುರುಪಾದಯ್ಯ ಚಟ್ಟಿಮಠ ಅಧ್ಯಕ್ಷತೆ ವಹಿಸುವರು ಎಂದರು.
ಸಮಾಜದ ಪ್ರಮುಖರಾದ ಮಹಾಂತೇಶ ಮನ್ನಯ್ಯನವರಮಠ, ಸಾಗರ ಮಠದ, ಬಸವರಾಜ ಹಿಟ್ಟಿನಮಠ, ಗುರುಲಿಂಗಯ್ಯ ಮಠಪತಿ, ಕುಮಾರ ಮನ್ನಯ್ಯನವರಮಠ, ಚನ್ನಯ್ಯ ಮಸಗುಪ್ಪಿಮಠ ಇದ್ದರು.
ಅಯ್ಯಾಚಾರ ಮಾಡಿಸುವವರು ಸಂಪರ್ಕಿಸುವ ಮೋಬೈಲ್ ನಂಬರ್ ಗಳು :9481010444,8618022827,9880076986,9845533416.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 