ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಅಂಗವಾಗಿ ಅಯ್ಯಾಚಾರ
Birth centenary program of Mahalingeshwara Swamiji
ಲೋಕದರ್ಶನ ವರದಿ
ಮಹಾಲಿಂಗಪುರ 25: ‘ಪಟ್ಟಣದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುಲಿಂಗೇಶ್ವರ ಸ್ವಾಮೀಜಿ ಪುಣ್ಯಾರಾಧನೆ ಅಂಗವಾಗಿ ಮೇ 6 ರಂದು ಮಹಾಲಿಂಗೇಶ್ವರ ಸಂಸ್ಥಾನಮಠದಲ್ಲಿ ಜಂಗಮ ವಟುಗಳಿಗೆ ಅಯ್ಯಾಚಾರ, ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಗುರುಪಾದಯ್ಯ ಚಟ್ಟಿಮಠ ಹೇಳಿದರು.
ಈ ಕುರಿತು ಮಂಗಳವಾರ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿ, ‘ಅಂದು ಬೆಳಿಗ್ಗೆ 6 ಗಂಟೆಗೆ ಗುರುಲಿಂಗೇಶ್ವರ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ, 7 ಗಂಟೆಗೆ ಜಂಗಮ ವಟುಗಳಿಗೆ ಅಯ್ಯಾಚಾರ ನಡೆಯಲಿದೆ. 10 ಗಂಟೆಗೆ ನಡೆಯುವ ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮದ ಸಾನಿಧ್ಯವನ್ನು ಚಿಪ್ಪಲಕಟ್ಟಿಯ ಸಿದ್ಧಲಿಂಗ ಶಿವಾಚಾರ್ಯರು ವಹಿಸುವರು. ಗುರುಪಾದಯ್ಯ ಚಟ್ಟಿಮಠ ಅಧ್ಯಕ್ಷತೆ ವಹಿಸುವರು ಎಂದರು.
ಸಮಾಜದ ಪ್ರಮುಖರಾದ ಮಹಾಂತೇಶ ಮನ್ನಯ್ಯನವರಮಠ, ಸಾಗರ ಮಠದ, ಬಸವರಾಜ ಹಿಟ್ಟಿನಮಠ, ಗುರುಲಿಂಗಯ್ಯ ಮಠಪತಿ, ಕುಮಾರ ಮನ್ನಯ್ಯನವರಮಠ, ಚನ್ನಯ್ಯ ಮಸಗುಪ್ಪಿಮಠ ಇದ್ದರು.
ಅಯ್ಯಾಚಾರ ಮಾಡಿಸುವವರು ಸಂಪರ್ಕಿಸುವ ಮೋಬೈಲ್ ನಂಬರ್ ಗಳು :9481010444,8618022827,9880076986,9845533416.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 