ನದಾಫ್ ಸಂಘದ ಸಂಸ್ಥಾಪಕರ ಜನ್ಮದಿನ ಆಚರಣೆ
Birthday celebration of the founder of Nadaf Association
ಲೋಕದರ್ಶನ ವರದಿ
ಮುದ್ದೇಬಿಹಾಳ 12: ಪಟ್ಟಣದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ವತಿಯಿಂದ ವಿದ್ಯಾನಿಕೇತನ ಶಾಲೆಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪಿಂಜಾರ ರತ್ನ ದಿ. ಹಾಜಿ ಹೆಚ್. ಇಬ್ರಾಹಿಂ ಸಾಹೇಬರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕ ಟಿ.ಎನ್. ರೂಡಗಿ, ಸಮಾಜವನ್ನು ಒಗ್ಗೂಡಿಸಿ ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ ಹಾಜಿ ಇಬ್ರಾಹಿಂ ಸಾಹೇಬರು ಪ್ರವರ್ಗ-1 ಮೀಸಲಾತಿ ಸೌಲಭ್ಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲಿಕಸಾಬ ನದಾಫ್, ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ, ಉಪಾಧ್ಯಕ್ಷರಾದ ಮಕ್ತುಮಸಾಬ ನದಾಫ್, ಮೌಲಾಸಾಬ ನದಾಫ್, ಲಾಡ್ಲೇಮಶಾಕ್ ನದಾಫ್, ಟಿ.ಎನ್. ರೂಡಗಿ, ಎನ್.ಬಿ. ಪಿಂಜಾರ, ದಾವಲಸಾಬ ವಾಲಿಕಾರ, ಹಸನಸಾಬ ಕವಡಿಮಟ್ಟಿ, ಬಾಬು ತಮದಡ್ಡಿ, ರಜಾಕ್ ಭೈರವಾಡಗಿ, ಹೆಚ್.ಐ. ಢವಳಗಿ, ಲಾಳೆಸಾಬ ದಿಡ್ಡಿಮನಿ ಹಾಗೂ ಅಬ್ದುಲ್ ರಜಾಕ್ ಮುದ್ನಾಳ ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ ಸ್ವಾಗತಿಸಿ, ವಂದಿಸಿದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 