ರಕ್ತದಾನಿಗಳ ದಿನ: ರಕ್ತದಾನ ಮಹತ್ವ ಸಾರಿದ ಯಡಿಯೂರಪ್ಪ
ಬೆಂಗಳೂರು, ಜೂ.14,ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ಹೇಳಿದ್ದಾರೆ.ಇನ್ನೊಬ್ಬರ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ರಕ್ತದಾನದ ಕುರಿತು ಅರಿವು ಮೂಡಿಸುವ, ರಕ್ತದಾನಿಗಳನ್ನು ಪ್ರೋತ್ಸಾಹಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ರಕ್ತ ಎಲ್ಲರಿಗೂ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಕುರಿತು ಪಣ ತೊಡೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಕೋವಿಡ್ ಸೋಂಕಿನ ಸಂದರ್ಭದಲ್ಲಿ ನಿಯಮಿತ ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸೋಣ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 