ಬ್ಯಾಂಕಿನ ಗ್ರಾಹಕರಿಗೆ ರಕ್ತದಾನ ಶಿಬಿರ
Blood donation camp for bank customers
ಸವಣೂರ 04 : ಬ್ಯಾಂಕಿನ ಗ್ರಾಹಕರಿಗೆ ರಕ್ತದಾನ ಶಿಬಿರದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ರಕ್ತದಾನ ಮಾಡಲು ಪ್ರೇರಣೆ ನೀಡಲು ರಕ್ತದಾನ ಶಿಬಿರ ಆಯೋಜನೆ ಮಾಡಲಾಯಿತು ಎಂದು ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್ ಸೋನಾಲಿ ಪ್ರಿಯದರ್ಶಿನಿ ಹೇಳಿದರು.
ಇಲ್ಲಿನ ಎಸ್ ಬಿ ಐ ಬ್ಯಾಂಕಿನಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ರಕ್ತ ಕೇಂದ್ರ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ರಕ್ತ ಶೇಖರಣಾ ಘಟಕ, ಸವಣೂರ ಹಾಗೂ ಎಸ್ ಬಿ ಐ ಸವಣೂರ ಶಾಖೆ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗೆ ಚಾಲನೆ ನೀಡಿ ಅವರು ಮಾತನಾಡಿದರು.
ಎಸ್ಬಿಐ ಬ್ಯಾಂಕ್ ಸ್ಥಾಪನೆಯಾಗಿ 70 ವರ್ಷಗಳು ಆಗಿದ್ದು,ಸವಿನೆನಪಿಗಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಗ್ರಾಹಕ ಸ್ನೇಹಿ ಬ್ಯಾಂಕ್ ನಮ್ಮದಾಗಿದ್ದು, ಗ್ರಾಹಕರ ಆರೋಗ್ಯದ ಕಾಳಜಿ ಪ್ರಯುಕ್ತವಾಗಿ ರಕ್ತದಾನ ಶಿಬಿರ ಮಾಡಲಾಯಿತು.ಗ್ರಾಹಕರು ಸದಾ ಆರೋಗ್ಯಯುತವಾಗಿ ಇರಲಿ ಎಂದು ಶುಭ ಹಾರೈದರು.ಇದೇ ಅವಧಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಬ್ಯಾಂಕ್ ಸಿಬ್ಬಂದಿಗಳಿಗೆ ಹಾಗೂ ಗ್ರಾಹಕರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಲಾಯಿತು. ಬ್ಯಾಂಕ್ ಮ್ಯಾನೇಜರ್ ಸೋನಾಲಿ ಪ್ರಿಯದರ್ಶಿನಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸವಣೂರ ತಾಲ್ಲೂಕು ಘಟಕದಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಡಾ.ಸುಧಾ,ಹಿರಿಯ ತಾಂತ್ರಿಕ ಅಧಿಕಾರಿ,ಬಸವರಾಜ ಕಮತದ,ರಕ್ತ ಶೇಖರಣಾ ಘಟಕದ ತಾಂತ್ರಿಕ ಅಧಿಕಾರಿ ಮಾಲತೇಶ ಹೊಳೆಮ್ಮನವರ,ರೆಡ್ ಕ್ರಾಸ್ ಸಂಸ್ಥೆಯ ನಿಂಗಪ್ಪ ಆರೇರ,ಕರವೇ ತಾಲ್ಲೂಕ ಅಧ್ಯಕ್ಷರಾದ ಪರಶುರಾಮ ಈಳಗೇರ,ನಾಗಪ್ಪ ಉಪ್ಪಿನ,ಬಸವರಾಜ ಬಡಿಗೇರ,ವೆಂಕಟೇಶ ಕರೆಕಲ್ಲ,ಯಾಶೀನಖಾನ ಬಂಕಾಪುರ,ದೀಪಕ ರಾಸಿನಕರ,ರಮೇಶಗೌಡ್ರ ಪಾಟೀಲ,ಶಿವಕುಮಾರ ಹಿರೇಮಠ, ಯಲ್ಲಪ್ಪ ಮಡಿವಾಳರ,ಎಸ್, ಅನಿತಾ ಕರಡಿಗುಡ್ಡ, ಸಿದ್ದು ಟಿ ಹೆಚ್ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 