ಹುಬ್ಬಳ್ಳಿಯಲ್ಲಿ ರಕ್ತ ದಾನ ಶಿಬಿರ ಕಾರ್ಯಕ್ರಮ
Blood donation camp program in Hubballi
ಹುಬ್ಬಳ್ಳಿ 30: ಗಣರಾಜ್ಯೋತ್ಸವ ಶುಭ ಸಂಭ್ರಮದಲ್ಲಿ ವಿದ್ಯಾನಗರದ ಅಶೋಕ್ ಸೂಪರ್ ಸ್ಪೆಷಾಲಿಟಿ ಮತ್ತು ಕಣ್ಣಿನ ಆಸ್ಪತ್ರೆಯಲ್ಲಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಅವರ 92 ನೇ ಜನ್ಮ ದಿನೋತ್ಸವ ನಿಮಿತ್ತ ರಕ್ತ ದಾನ ಶಿಬಿರ ಕಾರ್ಯಕ್ರಮ ಆಯೋಜಿಸಿದ್ದರು. ಸಾಮಾಜಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ, ಐ.ಎಂ.ಎ. ಹುಬ್ಬಳ್ಳಿ ಮಹಿಳಾ ಘಟಕದ ಕಾರ್ಯದರ್ಶಿ, ನೇತ್ರ ತಜ್ಞ ವೈದ್ಯರಾದ ಡಾ. ವರ್ಷಾ ಬಂಗಾರಶೆಟ್ಟರ್, ಹಾಗೂ ಖ್ಯಾತ ವೈದ್ಯರಾದ ಡಾ. ಅಶೋಕ್ ಬಂಗಾರಶೆಟ್ಟರ್ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು , ಗ್ರಂಥ ನೀಡಿ, ಮಾಲಾರೆ್ಣ ಮಾಡಿ ಆತ್ಮೀಯವಾಗಿ, ಹೃದಯಪೂರ್ವಕವಾಗಿ, ಗೌರವದಿಂದ ಸನ್ಮಾನಿಸಿದರು.
ಹಿರಿಯರಾದ ಮಹೇಶ್ ಬೊಮ್ಮಾಯಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ , ಸಾಹಿತಿ ಪ್ರೊ ಎಸ್.ಎಂ. ಸಾತ್ಮಾರ್, ಐ.ಎಂ.ಎ ಹುಬ್ಬಳ್ಳಿ ಘಟಕದ ಮಾಜಿ ಅಧ್ಯಕ್ಷ ಡಾ. ವಿ.ಬಿ.ನಿಟಾಲಿ, ಸೋಹನ್ ಸುರೇಶ್ ಹೊರಕೇರಿ, ಸುಜಯ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರೇಮ ಬಿಂದು ರಕ್ತ ಕೇಂದ್ರದ ವಿ.ಎಂ.ಹಿರೇಮಠ, ಬಿಂದು , ಮನೀಷ್, ಚನ್ನಬಸಪ್ಪ ಧಾರವಾಡಶೆಟ್ಟರ್, ವಿ. ಜಿ.ಪಾಟೀಲ, ಮುಂತಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 