ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ
ಲೋಕದರ್ಶನ ವರದಿ
ರಾಯಬಾಗ 27: ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನವಾಗಿದ್ದು, ಒಬ್ಬ ವ್ಯಕ್ತಿಜೀವ ಉಳಿಸುವಲ್ಲಿ ಮಹತ್ವದ್ದಾಗಿದೆ. ಆರೋಗ್ಯಯುತ ವ್ಯಕ್ತಿಯೋರ್ವ ವರ್ಷದಲ್ಲಿ 3 ಬಾರಿ ರಕ್ತದಾನ ಮಾಡಬಹುದು ಎಂದು ನಸಲಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯೆ ಪ್ರಿಯಾಂಕಾ ತಳವಾರ ಹೇಳಿದರು.ತಾಲೂಕಿನ ನಂದಿಕುರಳಿ ಗ್ರಾಮದ ವಿಠಲ ಮಂದಿರದಲ್ಲಿ ಆರೋಗ್ಯ ಇಲಾಖೆ, ಬೆಳಗಾವಿ ರಕ್ತ ಭಂಡಾರ(ಬಿಮ್ಸ್), ಗ್ರಾಮ ಪಂಚಾಯತ ನಂದಿಕುರಳಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ನಸಲಾಪೂರಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾಮಾನ್ಯವಾಗಿಎಲ್ಲ ವ್ಯಕ್ತಿಗಳು ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪತಿಯಾಗಿ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ಕೊಬ್ಬಿನಾಂಶ ಕಡಿಮೆಯಾಗಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಶಿಬಿರದಲ್ಲಿ ಬೆಳಗಾವಿ ಬಿಮ್ಸ್ನಡಾ.ಶ್ಯಾಮಬಾಗ, ಡಾ.ಶೀತಲ ಚೌಗಲಾ, ನಾಜಿಯಾ ಅಜಿನ್ನಾಬಡೆ, ಶ್ರವಣ ಕಾಂಬಳೆ, ಮಂಜುನಾಥ ಜಾಧವ, ರಾಜು ಸಾವಂತ, ಪೃಥ್ವಿರಾಜಜಾಧವ, ಅಮೀತ ಜಾಧವ, ಎಸ್.ಬಿ.ಭಜಂತ್ರಿ, ಅಕ್ಕಪ್ಪ ಕಾಂಬಳೆ, ರವೀಂದ್ರ ದೇಸಾಯಿ, ಸಿದ್ರಾಮ ಉಪ್ಪಾರ, ಪಿಡಿಒರಾಮಚಂದ್ರ ಮಾದರ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 