ರಕ್ತ ಅಮೂಲ್ಯವಸ್ತು ಪ್ರಾಣ ಉಳಿಸಲು ಮುಂದಾಗಬೇಕು: ರುದ್ರಪ್ಪ
ಲೋಕದರ್ಶನವರದಿ
ರಾಣೇಬೆನ್ನೂರು: ಜೂ.3: ಎಲ್ಲ ವಸ್ತುಗಳನ್ನು ಹಣದಿಂದ ಕೊಂಡುಕೊಳ್ಳಬಹುದು ಆದರೆ ಜೀವ ಉಳಿಸಲು ಬೇಕಾಗಿರುವುದು ಅಮೂಲ್ಯವಾದ ರಕ್ತ. ರಕ್ತದಾನಿಗಳು ತಮ್ಮ ರಕ್ತವನ್ನು ನೀಡುವುದರ ಮೂಲಕ ಮತ್ತೊಬ್ಬರ ಪ್ರಾಣ ಉಳಿಸಲು ಮುಂದಾಗಬೇಕು ಇದು ಪವಿತ್ರವಾದ ಕಾರ್ಯವಾಗಿದೆ ಎಂದು ಜೇಸಿ ಸಂಸ್ಥೆ ಅಧ್ಯಕ್ಷ ಶಿವರುದ್ರಪ್ಪ ಹೇಳಿದರು.
ಅವರು ಇಲ್ಲಿನ ಮೃತ್ಯುಂಜಯ ನಗರದ ಶ್ರೀ ಸಾಯಿ ಆಸ್ಪತ್ರೆ ಆವರಣದಲ್ಲಿ ರಾಣೇಬೆನ್ನೂರ ಬ್ಲಡ್ ಬ್ಯಾಂಕ್ನಲ್ಲಿ ನಗರದ ಪಂದಳಕಂದ ಕಮೀಟಿ, ಬ್ಲಡ್ ಡೋನರ್ಸ್, ಬ್ಲಡ್ ಬ್ಯಾಂಕ್ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. 18ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯ ವ್ಯಕ್ತಿ ರಕ್ತದಾನ ಮಾಡಬಹುದು. ಇದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಿ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.
ಬ್ಲಡ್ ಬ್ಯಾಂಕ್ ಮುಖ್ಯಸ್ಥ ಶ್ರೀಧರ, ಶ್ರೀ ಪಂದಳಕಂದ ಕಮಿಟಿ ಅಧ್ಯಕ್ಷ ಗಣೇಶ, ಕಾರ್ಯದಶರ್ಿ ಸಿದ್ಧು, ಗೋಪಿ ಮತ್ತಿತರ ಗಣ್ಯರು ಸಿಬ್ಬಂದಿ ಉಪಸ್ಥಿತರಿದ್ದರು
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 