ಹಾವೇರಿ: ಜಿಲ್ಲೆಯ ನೂತನ ರಕ್ತವಿದಳನ ಘಟಕದ ಸೌಲಭ್ಯ ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವಿದಳನ ಘಟಕ ಉದ್ಘಾಟಿಸಿ ಮಾತನಾಡಿದ ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ರಕ್ತಹೀನತೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿರುವ ಬಡವರಿಗೆ ಸಕಾಲದಲ್ಲಿ ಬೇಕಾದ ಗುಂಪಿನ ರಕ್ತದೊರೆಯದೆ ಕಷ್ಟಪಡುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕಪಾವತಿ ಮಾಡಲಾಗದೆ ತೊಂದರೆ ಅನುಭವಿಸುತ್ತಿದ್ದರು. ಆದರೆ ಇನ್ನು ಜಿಲ್ಲೆಯಲ್ಲಿಯೇ ರಕ್ತವಿದಳನ ಘಟಕ ಆರಂಭವಾಗಿದ್ದರಿಂದ ರಕ್ತ ಪಡೆಯಲು ಬೇರೆಕಡೆ ಹೋಗುವ ಅಗತ್ಯವಿಲ್ಲ. ಸಕರ್ಾರಿ ಆಸ್ಪತ್ರೆಯಲ್ಲೇ ಸುಲಭದಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮಾತನಾಡಿ, ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವಿದಳನ ಘಟಕವಿರಬೇಕು. ಜಿಲ್ಲೆ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ಈ ಘಟಕದ ಲಾಭ ಎಲ್ಲರಿಗೂ ಸಿಗಲಿ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ ಅವರು ರಕ್ತದಲ್ಲಿನ ನಾಲ್ಕು ಘಟಕಗಳಿರುತ್ತವೆ(ಕಾಂಪೊನೆಂಟ್). ಕೆಂಪು ರಕ್ತಕಣ, ಬಿಳಿರಕ್ತಕಣ, ಪ್ಲಾಸ್ಮಾ ಮತ್ತು ಪ್ಲೇಟ್ಲೆಟ್. ದಾನಿಗಳಿಂದ ಸಂಗ್ರಗಹಿಸುವ ರಕ್ತದಲ್ಲಿರುವ ಈ ನಾಲ್ಕು ಅಂಶಗಳನ್ನು ಪ್ರತ್ಯೇಕಿಸುವ ಘಟಕವೇ ವಿದಳನ ಘಟಕವಾಗಿದೆ. ರಕ್ತದ ಕಣಗಳನ್ನು ಬೇರ್ಪಡಿಸಿ ರೋಗಿಗಳಿಗೆ ಬೇಕಾದಂತ ಅಗತ್ಯ ಕಣಗಳನ್ನು ಒದಗಿಸುವ ಕಾರ್ಯವನ್ನು ತಕ್ತವಿದಳನ ಘಟಕ ಮಾಡುತ್ತದೆ. ಒಂದು ಯುನಿಟ್ ರಕ್ತದಿಂದ ನಾಲ್ಕು ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಿಂದ ಗರಿಷ್ಠ ಪ್ರಯೋಜನ ಪಡೆಯಬಹುದು. ಪ್ಲೇಟ್ಲೆಟ್ ಐದು ದಿನ ದಿನ ಉಳಿಯುತ್ತದೆ. ಕೆಂಪು ರಕ್ತಕಣ ಮತ್ತು ಬಿಳಿ ರಕ್ತಕಣಗಳನ್ನು 35 ದಿನಗಳವರೆಗೆ ಹಾಗೂ ಪ್ಲಾಸ್ಮಾವನ್ನು ಒಂದು ವರ್ಷದವರೆಗೂ ಕಡೆದಂತೆ ಇಡಬಹುದು ಎಂದು ಹೇಳಿದರು
ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಇತರ ವೈದ್ಯಕೀಯ ಹಾಗೂ ಅರೇವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.