ಬೋಟ್ ಮುಳುಗಿ ಲಕ್ಷಾಂತರ ಹಾನಿ
Boat sinks, causing millions in damage
ಲೋಕದರ್ಶನ ವರದಿ
ಬೋಟ್ ಮುಳುಗಿ ಲಕ್ಷಾಂತರ ಹಾನಿ
ಕಾರವಾರ 09: ಅಂಕೋಲಾ ತಾಲೂಕಿನ ಬೇಲೇಕೇರಿ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಶಾರದಾಂಬ ಹೆಸರಿನ ಪರ್ಸಿನ್ ಮೀನುಗಾರಿಕಾ ಬೋಟ್ ಗುರುವಾರ ಬೆಳಗಿನ ಜಾವ ಅಲೆಗಳ ತೀವ್ರತೆಗೆ ಮುಳುಗಡೆಯಾಗಿರುವ ಘಟನೆ ಸಂಭವಿಸಿದೆ.
ಸರಸ್ವತಿ ಅಶೋಕ ಬಾನಾವಳಿಕರ ಅವರ ಅಧೀನದಲ್ಲಿದ್ದ ಈ ಬೋಟ್ ಸಮುದ್ರದ ಅಲೆಗಳ ಅಬ್ಬರಕ್ಕೆ ಮುಳುಗಿ, ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ. ಬೋಟ್ನ ಎಂಜಿನ್, ಬಲೆಗಳು ಹಾಗೂ ಇತರ ಉಪಕರಣಗಳು ಹಾನಿಯಾಗಿವೆ. ಬೇಲೇಕೇರಿ ಗ್ರಾಮದ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದು ಬಂದರಿನಲ್ಲಿ ಅಲೆ ತಡೆಗೋಡೆ (ಬ್ರೇಕ್ವಾಟರ್) ಸೌಲಭ್ಯ ಇಲ್ಲದ ಕಾರಣ ಇಂತಹ ಘಟನೆಗಳು ಆಗಾಗ ನಡೆಯುತ್ತಿವೆ. ಭಾರೀ ಗಾತ್ರದ ಅಲೆಗಳಿಂದ ಬಂದರಿನಲ್ಲಿ ನಿಲ್ಲಿಸಿದ ಬೋಟ್ಗಳಿಗೂ ಅಪಾಯ ಉಂಟಾಗುತ್ತಿದೆ. ಹೀಗಾಗಿ ಅಲೆ ತಡೆಗೋಡೆ ನಿರ್ಮಿಸಲು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 