ಬೋಟ್ ಮುಳುಗಿ ಲಕ್ಷಾಂತರ ಹಾನಿ
Boat sinks, causing millions in damage
ಲೋಕದರ್ಶನ ವರದಿ
ಬೋಟ್ ಮುಳುಗಿ ಲಕ್ಷಾಂತರ ಹಾನಿ
ಕಾರವಾರ 09: ಅಂಕೋಲಾ ತಾಲೂಕಿನ ಬೇಲೇಕೇರಿ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಶಾರದಾಂಬ ಹೆಸರಿನ ಪರ್ಸಿನ್ ಮೀನುಗಾರಿಕಾ ಬೋಟ್ ಗುರುವಾರ ಬೆಳಗಿನ ಜಾವ ಅಲೆಗಳ ತೀವ್ರತೆಗೆ ಮುಳುಗಡೆಯಾಗಿರುವ ಘಟನೆ ಸಂಭವಿಸಿದೆ.
ಸರಸ್ವತಿ ಅಶೋಕ ಬಾನಾವಳಿಕರ ಅವರ ಅಧೀನದಲ್ಲಿದ್ದ ಈ ಬೋಟ್ ಸಮುದ್ರದ ಅಲೆಗಳ ಅಬ್ಬರಕ್ಕೆ ಮುಳುಗಿ, ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ. ಬೋಟ್ನ ಎಂಜಿನ್, ಬಲೆಗಳು ಹಾಗೂ ಇತರ ಉಪಕರಣಗಳು ಹಾನಿಯಾಗಿವೆ. ಬೇಲೇಕೇರಿ ಗ್ರಾಮದ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದು ಬಂದರಿನಲ್ಲಿ ಅಲೆ ತಡೆಗೋಡೆ (ಬ್ರೇಕ್ವಾಟರ್) ಸೌಲಭ್ಯ ಇಲ್ಲದ ಕಾರಣ ಇಂತಹ ಘಟನೆಗಳು ಆಗಾಗ ನಡೆಯುತ್ತಿವೆ. ಭಾರೀ ಗಾತ್ರದ ಅಲೆಗಳಿಂದ ಬಂದರಿನಲ್ಲಿ ನಿಲ್ಲಿಸಿದ ಬೋಟ್ಗಳಿಗೂ ಅಪಾಯ ಉಂಟಾಗುತ್ತಿದೆ. ಹೀಗಾಗಿ ಅಲೆ ತಡೆಗೋಡೆ ನಿರ್ಮಿಸಲು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 