ಬಾಂಬ್ ಬೆದರಿಕೆ : ಚೆನ್ನೈ ವಿಮಾನ ನಿಲ್ದಾಣದಲ್ಲಿ ರೆಡ್ ಅಲರ್ಟ್ ಘೋಷಣೆ
ಚೆನ್ನೈ, ಆಗಸ್ಟ್ 9 ಮಹಿಳಾ ಪ್ರಯಾಣಿಕರೊಬ್ಬರು ಬಾಂಬ್ ನಂತರ ಸ್ಫೋಟಕ ವಸ್ತು ತೆಗೆದುಕೊಂಡು ಹೋಗುತ್ತಿದ್ದಾರೆ ಎಂಬ ದೆಹಲಿ ಪೊಲೀಸರ ಮಾಹಿತಿ ಮೇರೆಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದೆಹಲಿ ವಿಮಾನ ನಿಲ್ದಾಣದ ಪೊಲೀಸ್ ನಿಯಂತ್ರಣ ಕೊಠಡಿಗೆ ಬಂದ ಎಚ್ಚರಿಕೆ ಕರೆಯಲ್ಲಿ
ಚನ್ನೈನಿಂದ ಸೌದಿ ಅರೆಬಿಯಾಕ್ಕೆ ಹೊರಟಿದ್ದ ಮಹಿಳಾ ಪ್ರಯಾಣಿಕರೊಬ್ಬರ ಬಳಿ
ಸ್ಫೋಟಕ ವಸ್ತು ಇದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಮೇರೆಗೆ ಎಚ್ಚರಿಕೆ ನೀಡಲಾಗಿದೆ.
ವಿಮಾನ ನಿಲ್ದಾಣ ಪ್ರಾಧಿಕಾರ ಸೇರಿದಂತೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಗುಪ್ತಚರ ಸಂಸ್ಥೆಗಳು ತುರ್ತ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.
ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಸಂದರ್ಶಕರ ಪ್ರವೇಶವನ್ನು ಸಹ ನಿಷೇಧಿಸಲಾಗಿದೆ. ವಾಹನ ನಿಲುಗಡೆ ಸ್ಥಳದಲ್ಲೂ ತೀವ್ರ ತಪಾಸಣೆ ನಡೆಸಲಾಗಿದೆ.
ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹಾಗೂ ಜಮ್ಮು - ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ನಂತರ ಕೆಲವು ಅಹಿತಕರ ಘಟನೆಗಳು ಜರುಗಬಹುದು ಎಂದು ಕೇಂದ್ರ ಗೃಹ ಸಚಿವಾಲಯವೂ ಎಚ್ಚರಿಕೆ ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 