ಹೈಕೋರ್ಟ್‌ಗೆ ಬಾಂಬ್ ಬೆದರಿಕೆ! ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ತಪಾಸಣೆ

ಹೈಕೋರ್ಟ್‌ಗೆ ಬಾಂಬ್ ಬೆದರಿಕೆ! ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ತಪಾಸಣೆ  Bomb threat to High Court! Inspections conducted in all courts in Uttara Kannada district


ಮುಂಡಗೋಡ 07: ಧಾರವಾಡ ಉಚ್ಚ ನ್ಯಾಯಾಲಯ ಪೀಠ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲಾ ನ್ಯಾಯಾಲಯಗಳನ್ನು ಮಂಗಳವಾರ ಮಧ್ಯಾಹ್ನ 1.55ರ ವೇಳೆಗೆ ಖಾಲಿ ಮಾಡಿಸಿ ಬಾಂಬ್ ಸ್ಫೋಟ ಅಥವಾ ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಬೆದರಿಕೆ ಇ-ಮೇಲ್ ಮೂಲಕ ಹೈಕೋರ್ಟ್‌ನ ಎಆರಿ​‍್ಜ (ಂಖಉ) ಗೆ ಬಂದ ಹಿನ್ನೆಲೆಯಲ್ಲಿ, ಹೈಕೋರ್ಟ್‌ ಪೀಠ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಯಿತು.  

ಈ ಹಿನ್ನೆಲೆಯಲ್ಲಿ ಮುಂಡಗೋಡ ಜೆಎಂಎಂಸಿ ನ್ಯಾಯಾಲಯಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವು ನ್ಯಾಯಾಲಯದ ಪ್ರತಿಯೊಂದು ಭಾಗ, ಮೂಲೆಮೂಲೆ ಹಾಗೂ ಹೊರ ಆವರಣದ ಎಲ್ಲಾ ಪ್ರದೇಶಗಳನ್ನು ಸೂಕ್ಷ್ಮವಾಗಿ ಪರೀಶೀಲಿಸಿತು. ಇದೇ ರೀತಿಯಲ್ಲಿ ಜಿಲ್ಲೆಯ ಇತರೆ ನ್ಯಾಯಾಲಯಗಳಲ್ಲಿಯೂ ಪರೀಶೀಲನೆ ನಡೆಸಲಾಯಿತು.  

ಈ ವೇಳೆಗೆ ಎ ಆರ್ ಎಸ್ ಐ ಸಂಜಯ ಭೋವಿ, ಎ ಆರ್ ಎಸ್ ಐ ಜಗನ್ನಾಥ ನಾಯ್ಕ್‌, ಆನಂದ ನಾಯ್ಕ್‌, ಸಂತೋಷ್ ನಾಯ್ಕ್‌, ಮಹೇಶ್ ನಾಯ್ಕ್‌, ಮಾಬ್ಲು ಗೌಡ, ನಿತ್ಯ ಗೌಡ, ಪ್ರಶಾಂತ್ ಮತ್ತು ಡಾಗ್ ಅಣಶಿ ಪರೀಶೀಲನೆ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.