೧೦ ಮಂದಿ ತಬ್ಲಿಘಿ ಜಮಾತ್ ವಿದೇಶಿ ಸದಸ್ಯರಿಗೆ ಬಾಂಬೆ ಹೈಕೋರ್ಟ್ ಜಾಮೀನು
ನಾಗಪುರ್, ಜೂನ್ ೧೩, ತಬ್ಲಿಘಿ ಜಮಾತ್ ನ ೧೦ ಮಂದಿ ವಿದೇಶಿ ಸದಸ್ಯರಿಗೆ ಬಾಂಬೆ ಹೈಕೋರ್ಟ್ ನ ನಾಗಪುರ್ ನ್ಯಾಯಪೀಠ ಶನಿವಾರ ಜಾಮೀನು ಮಂಜೂರು ಮಾಡಿದೆ. ಈ ಹತ್ತು ಮಂದಿ ಕಜಕಿಸ್ತಾನ್ ಹಾಗೂ ಕಿರ್ಗಿಸ್ಥಾನ ದೇಶಗಳ ನಾಗರೀಕರಾಗಿದ್ದಾರೆ.ಲಾಕ್ ಡೌನ್ ಹಿನ್ನಲೆಯಲ್ಲಿ ಗಡ್ಚಿರೋಲಿಯಲ್ಲಿ ನಾವು ಸಿಲುಕಿಕೊಂಡಿದ್ದು, ಯಾವುದೇ ವೀಸಾ ನಿಯಮಗಳನ್ನು ಉಲ್ಲಂಘಿಸಿಲ್ಲ ಹಾಗೂ ಗಡ್ ಚಿರೋಲಿಯಲ್ಲಿ ತಬ್ಲಿಘಿ ಜಮಾತ್ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ತಮ್ಮ ಆರ್ಜಿಗಳಲ್ಲಿ ಹೇಳಿಕೊಂಡಿದ್ದರು.ದಾರೂಲ್ ಉಲೂಂ ಶಾಹಿಯಲ್ಲಿ ವಾಸ್ತವ್ಯ ಹೂಡಬೇಕು ಹಾಗೂ ಪ್ರತಿ ಸೋಮವಾರ ಚಂದ್ರಾಪುರ್ ನಗರ ಪೊಲೀಸ್ ಠಾಣೆಗೆ ಹಾಜರಾಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಧೀಶ ಮನೀಷ್ ಪಿಟಾಲೆ ಈ ೧೦ ಮಂದಿಗೆ ಜಾಮೀನು ಮಂಜೂರು ಮಾಡಿದ್ದಾರೆ.ಅಲ್ಲದೆ, ಎಲ್ಲ ಪಾಸ್ ಪೋರ್ಟ್ ಗಳನ್ನು ತನಿಖಾ ಸಂಸ್ಥೆಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶಿಸಿದೆ.ಯಾವುದೇ ಪುರಾವೆಗಳನ್ನು ನಾಶಪಡಿಸುವ ಅಥವಾ ಷರತ್ತು ಉಲ್ಲಂಘನೆಯಾದರೆ ಜಾಮೀನು ರದ್ದಾಗಲಿದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.ಈ ಎಲ್ಲ ೧೦ ಮಂದಿ ವಿದೇಶಿ ತಬ್ಲಿಘಿ ಜಮಾತ್ ಸದಸ್ಯರನ್ನು ಗಡ್ ಚಿರೋಲಿ ಪೊಲೀಸರು ಕಳೆದ ಏಪ್ರಿಲ್ ೫ ರಂದು ವಿದೇಶಿಯರ ತಿದ್ದುಪಡಿ ಕಾಯ್ದೆ ೨೦೦೪ ಸೆಕ್ಷನ್ ೧೪(ಬಿ), ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮.೨೬೯. ೨೭೦ ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆ ೧೮೯೭ರ ಸೆಕ್ಷನ್ ೩,೪ರಡಿ ಬಂಧಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 