ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್
Box Cricket Stadium is a boon for cricket lovers: Lakshmi Hebbalkar
ಬೆಳಗಾವಿ 06: ಬಾಲಭವನದಿಂದ ಬೆಳಗಾವಿಯಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಾಕ್ಸ್ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬಾಲಭವನದ ವತಿಯಿಂದ ನಿರ್ಮಾಣವಾಗಿರುವ ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಯ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಅವರು ಆಸಕ್ತಿ ವಹಿಸಿ ಈ ಯೋಜನೆ ರೂಪಿಸಿದ್ದಾರೆ. ಬಾಲಭವನದಿಂದ, ಜಿಲ್ಲಾ ಪಂಚಾಯಿತಿಯಿಂದ ಹಾಗೂ ಶಾಸಕ ಆಸೀಫ್ ಸೇಠ್ ಅವರ ಶಾಸಕರ ಅನುದಾನದಿಂದ ಹಣ ಭರಿಸಲಾಗಿದೆ. ಸರಕಾರಿ ಶಾಲೆಗಳ ಮಕ್ಕಳಿಗೆ ಕ್ರಿಕೆಟ್ ತರಬೇತಿ ನೀಡಿ ಪ್ರತಿಭಾವಂತರನ್ನು ಮುಂದಿನ ಹಂತಕ್ಕೆ ಕಳಿಸಲಾಗುವುದು. 5 ವಿಕಲಚೇತನರಿಗೂ ಅವಕಾಶ ನೀಡಲಾಗುವುದು ಎಂದರು.
ಕೌರಿ ಗುಡ್ಡದಲ್ಲಿ ಗಿಡಗಳನ್ನು ಕಡಿದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಯೋಜನೆ, ಸರಕಾರದ ಜಾಗ. ಇದರಲ್ಲಿ ಬೇರೆಯವರ ಕೈವಾಡ ಹೇಗಿರುತ್ತದೆ? ನನಗೆ ಯೋಜನೆಯ ಮಾಹಿತಿ ಇರಲಿಲ್ಲ. ಮಾಧ್ಯಮಗಳಲ್ಲಿ ಬಂದ ತಕ್ಷಣ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಯಾರದ್ದೇ ತಪ್ಪಿದ್ದರೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಮೆಟ್ರೋ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕುರಿತು ಕೇಳಿದಾಗ, ಪೆಟ್ರೋಲ್, ಡಿಸೆಲ್, ಬಂಗಾರ್, ಬೆಳ್ಳಿ, ಡಾಲರ್, ಗ್ಯಾಸ್ ಸೇರಿದಂತೆ ನೂರಾರು ವಸ್ತುಗಳ ಬೆಲೆ ಹೆಚ್ಚಳವಾಗಿದೆಯಲ್ಲ ಎಂದರು.
ಬಾಲ್ಯ ವಿವಾಹ ಮತ್ತು ಪೊಕ್ಸೋಪ್ರಕರಣಗಳ ಕುರಿತು ಕೇಳಿದಾಗ, ಅನಿಷ್ಟ ಪದ್ಧತಿಗಳನ್ನು ಬೇರು ಮಟ್ಟದಿಂದ ಕಿತ್ತುಹಾಕಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಲ್ಲಿ ಅಡ್ರೆಸ್ಸೇ ಇಲ್ಲ, ಯಾವಾಗಲೋ ಬಂದು ಹೋಗುತ್ತಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಸೈಟ್ ತೆಗೆದುಕೊಂಡಿದ್ದಾರೆ, ಮನೆ ಕಟ್ಟಿಸುತ್ತಾರೆ ಎಂದು ಕೇಳಿದ್ದೇನೆ ಎಂದು ಹೆಬ್ಬಾಳಕರ್ ಹೇಳಿದರು.
ಗೃಹಲಕ್ಷ್ಮಿ ಯೋಜನೆ ಬಗ್ಗೆ ಕೇಳಿದಾಗ, ಈಗಾಗಲೆ 26 ಕಂತುಗಳನ್ನು ನೀಡಲಾಗಿದ್ದು, ಒಬ್ಬೊಬ್ಬರಿಗೆ 52 ಸಾವಿರ ರೂ ನೀಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಆಸೀಫ್ ಸೇಠ್, ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಪಂ ಸಿಇಒ ರಾಹುಲ್ ಶಿಂಧೆ ಮೊದಲಾದವರಿದ್ದರು.
ಇದಕ್ಕೂ ಮೊದಲು ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಆಸಿಫ್ ಸೇಠ್, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಸಿಂಧೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಚೇತನಕುಮಾರ್, ಸಿಡಿಪಿಒ ಸುಮಿತ್ರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 