ಬಸ್-ಲಾರಿ ಮಧ್ಯೆ ಡಿಕ್ಕಿ: ಬಾಲಕ ಸಾವು
Boy dies in bus-lorry collision
ದೇವರಹಿಪ್ಪರಗಿ 04: ಪಟ್ಟಣದ ಸಮೀಪದ ರಾಜಸ್ಥಾನ ಡಾಬಾ ಬಳಿ ಶುಕ್ರವಾರ ರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆಯ ಬಸ್(ವಿಜಯಪುರ ಡಿಪೋ-2) ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ.
ಈ ಅಪಘಾತದಲ್ಲಿ ಸಿಂದಗಿ ತಾಲೂಕಿನ ಬಳಗಾನೂರ ಗ್ರಾಮದ ಕೇದಾರಲಿಂಗ ಪರಶುರಾಮ ಮಾಲ್ದ(06)ಬಾಲಕ ಶನಿವಾರದಂದು ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಸುಮಾರು 20-30 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಅಂಬ್ಯುಲೆನ್ಸ್, ಖಾಸಗಿ ಹಾಗೂ ಸರ್ಕಾರಿ ಬಸ್ ಮೂಲಕ ವಿಜಯಪುರ, ದೇವರಹಿಪ್ಪರಗಿ ಹಾಗೂ ಸಿಂದಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಜಯಪುರ ಡಿಪೋ-2ಸೇರಿದ ಬಸ್ ಹಾಗೂ ಲಾರಿ ವಿಜಯಪುರದಿಂದ ಸಿಂದಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ಯಾವುದೇ ಮುನ್ಸೂಚನೆ ನೀಡದೆ ಡಾಬಾ ಕಡೆ ಟರ್ನ್ ಮಾಡಿದ ಕಾರಣ ಬಸ್ ನಿಯಂತ್ರಣ ಲಾರಿಗೆ ಡಿಕ್ಕಿ ಹೊಡೆದು ಪರಿಣಾಮ ನಡೆದ ಘಟನೆ ಹಾಗೂ ದಾಖಲಿಸಲಾಗಿದೆ.ಘಟನೆಯಲ್ಲಿ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಬಾಲಕನ ತಂದೆ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 