ಬೀದಿನಾಯಿ ಕಚ್ಚಿ ರೇಬಿಸ್ ಖಾಯಿಲೆಗೆ ಬಾಲಕ ಬಲಿ
Boy dies of rabies after being bitten by a stray dog
ಕೊಲ್ಹಾರ 02: ತಾಲೂಕಿನ ಸಿದ್ಧನಾಥ ಗ್ರಾಮದಲ್ಲಿ ಬೀದಿನಾಯಿ ಕಚ್ಚಿ ರೇಬಿಸ್ ಖಾಯಿಲೆಯಿಂದ 16 ವರ್ಷದ ಬಾಲಕ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾನೆ ಗ್ರಾಮದ ದರಿಯಪ್ಪ ಕೋಳಮಲಿ ಅವರ ಸುಪುತ್ರ ಅಪ್ಪು ಕೋಳಮಲಿ ಈಗತಾನೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಕಳೆದ ಎಪ್ರಿಲ್ ತಿಂಗಳ ಪರೀಕ್ಷೆಯ ಫಲಿತಾಂಶದಲ್ಲಿ ಆತ ಪಾಸಾಗಿದ್ದ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಗ್ರಾಮದಲ್ಲಿ ಬೀದಿನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕನನ್ನು ಪಾಲಕರು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ನಾಟಿ ವೈದ್ಯರ ಹತ್ತಿರ ಹೋಗಿ ಚಿಕಿತ್ಸೆ ಕೊಡಿಸಿದ್ದರು ಎನ್ನಲಾಗುತ್ತಿದೆ. ಬಳಿಕ ಬಾಲಕ ರೋಗ ಉಲ್ಬಣಗೊಂಡು ರೇಬಿಸ್ ಖಾಯಿಲೆಯಿಂದ ಮೃತಪಟ್ಟಿದ್ದಾನೆ.
ಶನಿವಾರ ಗ್ರಾಮದಲ್ಲಿ ಆತನ ಅಂತ್ಯಕ್ರಿಯೆ ನಡೆದಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದೆ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಬೀದಿನಾಯಿಗಳ ಅಟ್ಟಹಾಸ ಮೆರೆದಿದ್ದು ಕುರಿ ಮೇಕೆಗಳು ಸೇರಿದಂತೆ ಶಾಲಾ ಮಕ್ಕಳ ಮೇಲೆ ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ಜರುಗಿದ್ದವು. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರದ ಭರವಸೆಯ ಹೇಳಿಕೆ ನೀಡಿದ್ದರೂ ಇದುವರೆಗೆ ಬೀದಿನಾಯಿಗಳ ದಾಳಿಗೆ ಒಳಗಾದ ಕುಟುಂಬಕ್ಕೆ ಯಾವುದೇ ಪರಿಹಾರದ ಹಣವನ್ನು ಒದಗಿಸಿಲ್ಲ ಎಂದು ನೊಂದಿರುವ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 