ಬಾಲಕ ನಾಪತ್ತೆ: ಪತ್ತೆಗೆ ಮನವಿ
Boy missing: Appeal to find him
ಲೋಕದರ್ಶನ ವರದಿ
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ 18: ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ 01ನೇ ವಾರ್ಡ್ನ ನಿವಾಸಿ ಯಮನೂರ್ಪ ಎನ್ನುವ 15 ವರ್ಷದ ಬಾಲಕ ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮನೆಗೆ ಬಾರದೇ ಫೆ.17 ರಂದು ಕಾಣೆಯಾಗಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಮನವಿ ಮಾಡಿದ್ದಾರೆ. ಚಹರೆ: ಎತ್ತರ 5.1 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ತಿಳಿ ನೀಲಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಅಂಗಿ ಧರಿಸಿರುತ್ತಾನೆ. ಕಾಣೆಯಾದ ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿಎಸ್ಐ ದೂ.08396-248013, ಮೊ.9480803055, ಸಿಪಿಐ ದೂ.08396-248044, ಬಳ್ಳಾರಿ ಗ್ರಾಮೀಣ ಉಪವಿಭಾಗ ಡಿಎಸ್ಪಿ ದೂ.08392-276000, ಬಳ್ಳಾರಿ ಎಸ್ಪಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 