ಚಿಕ್ಕೋಡಿ ಇಂಗಡಿ- ಜಲಾಲಪುರ ಮಧ್ಯೆ ಬ್ರಿಡ್ಜ್
Bridge between Chikkodi Ingadi- Jalalpur
ಚಿಕ್ಕೋಡಿ 19: ಚಿಕ್ಕೋಡಿ ತಾಲೂಕಿನ (ಹಳೆ ದಿಗ್ಗೇವಾಡಿ) ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ ಅಗತ್ಯವಿರುವ ?37 ಕೋಟಿ ಅನುದಾನ ಮಂಜೂರು ಮಾಡುವಂತೆ ಹಾಗೂ ಚಿಕ್ಕೋಡಿ ವಿಭಾಗ ಮಟ್ಟದಲ್ಲಿ ಕ್ಯಾನ್ಸರ್ ಆಸ್ಪತ್ರೆ ಶಾಖೆ ಆರಂಭಿಸಲು 2026ಹಿ27್ಫೂ ಸಾಲಿನ ಆಯವ್ಯದಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.ಈ ಯೋಜನೆ ಪೂರ್ಣಗೊಂಡಲ್ಲಿ ಇಂಗಳಿ, ಮಾಂಜರಿ, ಅಂಕಲಿ, ಯಡುರ ಸೇರಿದಂತೆ ರಾಯಬಾಗ ತಾಲೂಕಿನ ಜಲಾಲಪೂರ, ದಿಗ್ಗೇವಾಡಿ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.
ಅಲ್ಲದೆ ರಸ್ತೆ ಸಂಪರ್ಕ ಸುಧಾರಿಸಿ ಕಬ್ಬು ಸಾಗಣೆ ದೂರ ಸುಮಾರು 25 ಕಿ.ಮೀ ಕಡಿಮೆಯಾಗಲಿದೆ ಎಂದು ತಿಳಿಸಲಾಯಿತು.ಚಿಕ್ಕೋಡಿ ವಿಭಾಗದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿದ್ದು, ರೋಗಿಗಳು ಬೆಳಗಾವಿ, ಹುಬ್ಬಳ್ಳಿ ಹಾಗೂ ಮಹಾರಾಷ್ಟ್ರದ ಕೊಲ್ಹಾಪುರ, ಮೀರಜ ನಗರಗಳಿಗೆ ಚಿಕಿತ್ಸೆಗಾಗಿ ತೆರಳಬೇಕಾಗಿದೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ ಚಿಕ್ಕೋಡಿ ವಿಭಾಗದಲ್ಲಿ ಒಟ್ಟು 8295 ಕ್ಯಾನ್ಸರ್ ರೋಗಿಗಳಿದ್ದಾರೆ.ಈ ಹಿನ್ನೆಲೆ “ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ” ಕ್ಯಾನ್ಸರ್ ಆಸ್ಪತ್ರೆ ಶಾಖೆಯನ್ನು ಚಿಕ್ಕೋಡಿಯಲ್ಲಿ ಆರಂಭಿಸುವಂತೆ ವಿನಂತಿಸಲಾಯಿತು. ಮುಖ್ಯಮಂತ್ರಿಗಳು ಸಕಾರಾತ್ಮಕ ಪ್ರತಿಕ್ರಿಯೆ ನೀಡಿ, ಅನುದಾನ ಹಾಗೂ ಆಸ್ಪತ್ರೆ ಶಾಖೆಯನ್ನು 2026ಹಿ27್ಫೂ ಆಯವ್ಯದಲ್ಲಿ ಅಳವಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 