ಸಹ ಪಠ್ಯ ಚಟುವಟಿಕೆಗಳಿಂದ ಜ್ಞಾನದ ವಿಸ್ತಾರ
Broadening knowledge through co-curricular activities
ಹೂವಿನ ಹಡಗಲಿ 06- ಸಹ ಪಠ್ಯ ಚಟುವಟಿಕೆಗಳಿಂದ ಜ್ಞಾನದ ವಿಸ್ತಾರ ಆಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಲಿಟಲ್ ಚಾಂಪ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಶಿಕ್ಷಕರ ಕಲ್ಯಾಣ ನಿಧಿವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಕ್ಷಕರು ಪಠ್ಯ ಬೋಧನೆ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ತಮ್ಮ ಬೋಧನಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಿಕೊಳ್ಳಬೇಕು.ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹ ಪಠ್ಯ ಚಟುವಟಿಕೆಗಳ ಪೂರಕ ಎಂದು ಹೇಳಿದರು.ಭಾಷಣ ಪ್ರಬಂಧ ರಸಪ್ರಶ್ನೆ ಪಾಠೋಪಕರಣ ತಯಾರಿಕೆ ರಸಪ್ರಶ್ನೆ ಗಾಯನ ಚಿತ್ರಕಲೆ ವಿವಿಧ ವಿಷಯಗಳ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಪರಿಣಾಮಕಾರಿಯಾಗಿ ಬೋಧಿಸಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹ ಪಠ್ಯ ಚಟುವಟಿಕೆಗಳ ಪೂರಕವಾಗಿದೆ ಎಂದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್ ಮಾತನಾಡಿ ಶಿಕ್ಷಕರ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಪ್ರತಿವರ್ಷ ಈ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದು ತಿಳಿಸಿದರು.ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಮುಂದಿನ ದಿನಗಳಲ್ಲಿ ನಡೆಯುವ ಸರ್ಕಾರಿ ನೌಕರರ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು.ಬಡ್ತಿ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶೇಕ್ ಅಹಮದ್ ಶಿಕ್ಷಕರು ಸಾಂಸ್ಕೃತಿಕ ವಿಭಾಗದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿ ಎಚ್ ಯೇಸು ಕೋಶಾಧಿಕಾರಿ ಪಕ್ಕೀರಸಾಬ್ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಕೆ ಜಗದೀಶ್ ತಾಲೂಕು ಜಿ ಪಿ ಟಿ ಶಿಕ್ಷಕರ ಸಂಘದ ಅಧ್ಯಕ್ಷ ಯಂಕಾನಾಯ್ಕ ಮುಖ್ಯ ಗುರು ಟಿ ಪಿ ವೀರೇಂದ್ರ ಶಾಲೆಯ ಮುಖ್ಯ ಗುರುಗಳಾದ ಕೊಟ್ರೇಶ್ ಇತರರು ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕ ಮಿಟ್ಯಾನಾಯ್ಕ್ ಹಣ್ಣಿ ನರೇಶ ಬಿ ಆರ್ ಪಿ ಬಸವರಾಜ ನಿರ್ವಹಿಸಿದರು.ತಾಲೂಕಿನ ಆಸಕ್ತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 