"ಮನುಷ್ಯ ಸಮಾನತೆಯನ್ನು ಬೋಧಿಸಿದ ಏಕೈಕ ಧರ್ಮ ಬುದ್ಧ ಧರ್ಮ"
Buddha Purnima celebrations in Karwar:
ಕಾರವಾರದಲ್ಲಿ ಬುದ್ಧಪೂರ್ಣಿಮೆ ಆಚರಣೆ :
ಕಾರವಾರ 01: ಪ್ರಗತಿಪರ ರಾಜ್ಯ ದಲಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಶುಕ್ರವಾರ ಬುದ್ಧಪೂರ್ಣಿಮೆಯನ್ನು ಆಚರಿಸಲಾಯಿತು.
ನಗರದ ಕಾಜುಬಾಗದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಬುದ್ಧನ ಪ್ರತಿಮೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಅವರು ಮಾಲಾರೆ್ಣ ಮಾಡಿದರು. ಪ್ರಗತಿಪರ ರಾಜ್ಯ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ಬುದ್ಧನ ಪ್ರತಿಮೆಗೆ ಮಾಲಾರೆ್ಣ ಮಾಡಿದರು. ಗೌತಮ ಬುದ್ಧನ ಜನನ, ಬೋಧಿ ಮತ್ತು ಮಹಾಪರಿನಿರ್ವಾಣ ಸ್ಮರಣೆಗಾಗಿ ಬುದ್ಧಪೂರ್ಣಿಮೆಯನ್ನು ಆಚರಿಸಲಾ ಗುತ್ತದೆ ಎಂದರು. ಗೌತಮ ಬುದ್ಧ ನಮಗೆ ಆದರ್ಶ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಕೊನೆಯ ಜೀವಿತಾವಧಿಯಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಬುದ್ಧನ ಆದರ್ಶಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅನುಸರಿಸಿದರು. ಬುದ್ದ ಧರ್ಮ ಸಮಾನತೆಯನ್ನು ಸಾರುತ್ತದೆ ಎಂದರು. ಶಾಂತಿ, ಕರುಣೆ ಮತ್ತು ಜ್ಞಾನಕ್ಕಾಗಿ ಧ್ಯಾನ ಮಾಡಬೇಕು. ಬುದ್ಧನ ಉಪದೇಶಗಳನ್ನು ಕೇಳುವುದು ಮತ್ತು ಚರ್ಚೆ ಮಾಡುವುದು.
ವೇದಿಕೆ ಮೇಲೆ ಮೆಹಬೂಬ್ ಇನಾಮದಾರ, ಮಾಲತೇಶ ಲಮಾಣಿ, ರಮಕಾಂತ ಗುನಗಿ, ರೂಪೇಶ ಗುನಗಿ, ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರವಾರ ತಾಲೂಕು ಅಧ್ಯಕ್ಷ ಅಬ್ಬಾಸ್, ಪ್ರಸಾದ ಹುಲಸ್ವಾರ ಮತ್ತಿತರರು ಹಾಜರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 