ಬಡ್ಸ್ ಎನ್ಸಿಡಿಪಿ ಯೋಜನೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಟಗೇರಿ 15: ನಾಗನೂರ ಬಡ್ಸ್ ಸಂಸ್ಥೆ ಹಾಗೂ ಜಪಾನ ಎನ್ಎಫ್ಯುಎ ಸಹಯೋಗದಲ್ಲಿ ನೀಡುವ ಕಲಿಕಾ ಮತ್ತು ಭೋಧನಾ ಪರಿಕರಗಳ ಸದುಪಯೋಗವನ್ನು ಶಾಲಾ ಮಕ್ಕಳು ಪಡೆದುಕೊಳ್ಳಬೇಕು ಎಂದು ನಾಗನೂರ ಬಡ್ಸ್ ಸಂಸ್ಥೆಯ ಕಾರ್ಯನಿವರ್ಾಹಕ ನಿದರ್ೇಶಕ ಆರ್.ಎಮ್.ಪಾಟೀಲ ಹೇಳಿದರು.
ನಾಗನೂರ ಬಡ್ಸ್ ಸಂಸ್ಥೆ ಹಾಗೂ ಜಪಾನ ಎನ್ಎಫ್ಯುಎ ಸಹಯೋಗದಲ್ಲಿ ಶನಿವಾರ ಡಿ.14 ರಂದು ನಡೆದ ಪ್ರವಾಹೊತ್ತರ ಶೈಕ್ಷಣಿಕ ಪುನರ್ವಸತಿ ಯೋಜನೆ ಅಡಿಯಲ್ಲಿ ಸಮೀಪದ ಉದಗಟ್ಟಿ ಗ್ರಾಮದ ಸಕರ್ಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಎಲ್ಲ ಮಕ್ಕಳಿಗೆ ಕಲಿಕಾ ಮತ್ತು ಭೋದನಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಗೋಕಾಕ-ಮೂಡಲಗಿ ತಾಲೂಕಿನ ಹಲವಾರು ಹಳ್ಳಿಗಳ ರೈತರು, ನಾಗರಿಕರು ಪ್ರವಾಹಕ್ಕೆ ಸಿಲುಕಿ ಮನೆ, ಬೆಳೆಗಳನ್ನು ಕಳೆದುಕೊಂಡದ್ದು ಶೊಚನೀಯವಾಗಿದೆ ಎಂದರು.
ಉದಗಟ್ಟಿ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ 392 ಮಕ್ಕಳಿಗೆ, ಭಾಗನ್ನವರ ತೋಟದ ಸಕರ್ಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ 73 ಮಕ್ಕಳಿಗೆ, ನಾಗಲಿಂಗೇಶ್ವರ ತೋಟದ ಸಕರ್ಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ 64 ಮಕ್ಕಳಿಗೆ ಕಲಿಕಾ ಪರಿಕರ ಮತ್ತು ಶಾಲೆಗೆ ಭೋಧನಾ ಸಾಮಗ್ರಿಗಳನ್ನು ವಿತರಿಸಲಾಗಿದೆ ಎಂದು ಬಡ್ಸ್ ಎನ್ಸಿಡಿಪಿ ಯೋಜನೆಯ ಕಾರ್ಯಕ್ರಮ ಅಧಿಕಾರಿ ಅಶೋಕ ಪೂಜೇರ ತಿಳಿಸಿದರು.
ಮಹೇಶ ನೀಲಗಾರ, ಮಲಕಾರಿ ವಡೇರ, ಬಸರೆಪ್ಪ ಶಿಗಿಹಳ್ಳಿ, ತುಕ್ಕಾನಟ್ಟಿ ಬಡ್ಸ್ ಬಿ.ಎಸ್.ಡಬ್ಲೂ ಕಾಲೇಜಿನ ವಿದ್ಯಾಥರ್ಿಗಳು, ಸಿಎಲ್ಸಿ-ಎಮ್ಸಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಸಕರ್ಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕರು, ಶಿಕ್ಷಣಪ್ರೇಮಿಗಳು, ಹಿರಿಯ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 