ಸಿಡಿಲು ಬಡಿದು ಎಮ್ಮೆ ಸಾವು
Buffalo dies after being struck by lightning
ಕೊಲ್ಹಾರ 15: ಪಟ್ಟಣದಲ್ಲಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಸಿಡಿಲು ಬಡಿದು ಎಮ್ಮೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.ಪಟ್ಟಣದ ಎರಡನೇ ವಾರ್ಡಿನ ಕಲ್ಲಪ್ಪ ಸಂಗಪ್ಪ ಗಣಿ ಅವರಿಗೆ ಸೇರಿದ್ದ ಎಮ್ಮೆಯನ್ನು ಪಕ್ಕದ ಹಣಮಂತ ದೇವಸ್ಥಾನ ಸಮೀಪ ಗಿಡದ ಕೆಳಗೆ ಕಟ್ಟಿದ್ದಾರೆ. ತೆಂಗಿನ ಗಿಡಕ್ಕೆ ಸಿಡಿಲು ಬಡಿದ ಪರಿಣಾಮ ತೀವ್ರತೆಗೆ ಪಕ್ಕದಲ್ಲಿದ್ದ ಎಮ್ಮೆ ಕೂಡಾ ಸಾವನ್ನಪ್ಪಿದ ಘಟನೆ ರಾತ್ರಿ 8:30 ರ ಸುಮಾರಿಗೆ ನಡೆದಿದೆ. ಸಿಡಿಲು ಬಡೆದು ತೆಂಗಿನಗಿಡ ಹೊತ್ತಿ ಉರಿಯುತ್ತಿದ್ದಂತೆ ಸ್ಥಳಿಯರು ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಬೀಳಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕೊಲ್ಹಾರ ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ತೆಂಗಿನ ಗಿಡಕ್ಕೆ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಆರಿ ಹೋಗಿತ್ತು. ಎಮ್ಮೆ ಸಾವಿಗೆ ಸಂಬಂಧಿಸಿದಂತೆ ಶುಕ್ರವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 